Breaking News

ನೀರಿನ‌ ಸದ್ಬಳಕೆಗೆ ಅಂತರ ರಾಜ್ಯ ನದಿ ಜೋಡಣೆ ಮಾಡಬೇಕಾದ ಅಗತ್ಯವಿದೆ.:ಸಚಿವ ರಮೇಶ್ ಜಾರಕಿಹೊಳಿ‌

Spread the love

ಬೆಂಗಳೂರು: ಮುಂದಿನ 30 ವರ್ಷಗಳ ನೀರಾವರಿ ‌ಯೋಜನೆಗಳ ಅನುಷ್ಠಾನ ದ ಉದ್ದೇಶದಿಂದ ಕರ್ನಾಟಕ ರಾಜ್ಯ ನೀರಾವರಿ ಆಯೋಗ ಸ್ಥಾಪನೆ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡುವುದಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ನಿವೃತ್ತ ಕಾರ್ಯದರ್ಶಿ, ನೀರಾವರಿ ತಜ್ಞ ಕ್ಯಾ. ರಾಜಾರಾವ್ ಅವರೊಂದಿಗೆ ಕರ್ನಾಟಕ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಬೆಂಗಳೂರಿನ ವಿಧಾನಸೌದ ಕಚೇರಿಯಲ್ಲಿ ಇಂದು ಚರ್ಚಿಸಿದ ಬಳಿಕ ಮಾತನಾಡಿದರು.

ಕುಡಿಯುವ ನೀರು, ಅಂತರ್ಜಲ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ನೀರಿನ ಬಳಕೆ ಕುರಿತಂತೆ ದೂರದೃಷ್ಟಿಯ ನೀಲನಕ್ಷೆ ಸಿದ್ದಪಡಿಸಲಾಗುವುದು. ಮುಂದಿನ‌ ಮಳೆಗಾಲದಲ್ಲಿ ಅತಿವೃಷ್ಠಿ ತಡೆಗೆ ವ್ಯಾಪಕ‌ ಕ್ರಮ ಕೈಗೊಳ್ಳಲಾಗಿದೆ. ನಮ್ಮ ನೀರನ್ನು‌ ಉಳಿಸಿಕೊಂಡು ಯೋಜನೆಗಳನ್ನು‌ ಪ್ರಾರಂಭಿಸುತ್ತೇವೆ ಎಂದರು. ನೀರಿನ‌ ಸದ್ಬಳಕೆಗೆ ಅಂತರ ರಾಜ್ಯ ನದಿ ಜೋಡಣೆ ಮಾಡಬೇಕಾದ ಅಗತ್ಯವಿದೆ. ಇದರಿಂದ ರಾಜ್ಯದ ನೀರಿನ‌ ಪಾಲು ಕೂಡಾ ಹೆಚ್ಚಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರದ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಈ‌ ಕುರಿತು ಚರ್ಚಿಸಲಾಗುವುದು ಎಂದು‌ ಜಲಸಂಪನ್ಮೂಲ ಸಚಿವರು ತಿಳಿಸಿದರು.

ಹನಿ ನೀರಾವರಿ ಯೋಜನೆಗಳ ಅನುಷ್ಠಾನ ಕುರಿತು ವಿಸ್ತೃತ ನೀತಿ ರೂಪಿಸುತ್ತೇವೆ. ದೊಡ್ಡ ಮಟ್ಟದ ಏತ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸರ್ಕಾರ, ನೀತಿಯನ್ನು ರೂಪಿಸಬೇಕಾಗಿದ್ದು ಈ ಕುರಿತಂತೆ ಇಲಾಖೆಯ ಮಟ್ಟದಲ್ಲಿ ಚರ್ಚೆ ಮಾಡಿ ಶೀಘ್ರವಾಗಿ ತೀರ್ಮಾನವನ್ನು ಕೈಗೊಳ್ಳಲಾಗುವುದೆಂದು ಸಚಿವರು ತಿಳಿಸಿದರು.

ಕೃಷ್ಣ ನದಿ ನೀರಿನ ಸದ್ಬಳಕೆ ಗಾಗಿ ಕೂಡಲೇ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರಕ್ಕೆ ಮನವಿ‌ ಮಾಡಲಾಗಿದೆ. ಈ‌ ಕುರಿತಂತೆ ನವದೆಹಲಿಗೆ ತೆರಳಿ ಕೇಂದ್ರದ ಜಲಶಕ್ತಿ ಸಚಿವರೊಂದಿಗೆ ಈ‌ ಕುರಿತು ಮಾತನಾಡಿ ಕೂಡಲೇ ಅಧಿಸೂಚನೆ ಹೊರಡಿಸಲು‌ ಮನವಿ‌ ಮಾಡುತ್ತೇವೆ ಎಂದು ಜಲಸಂಪನ್ಮೂಲ ಸಚಿವರು ತಿಳಿಸಿದರು.

ನೀರಾವರಿ ತಜ್ಞ ಕ್ಯಾ. ರಾಜಾರಾವ್ ಅವರು‌ ಇಂದು ಮಾನ್ಯ ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ‌ ಅವರನ್ನು ವಿಧಾನಸೌಧದ ಕಛೇರಿಯಲ್ಲಿ‌ ಭೇಟಿ ಮಾಡಿ ಹಲವು ನೀರಾವರಿ ಯೋಜನೆ ಗಳ ಕುರಿತು ಚರ್ಚಿಸಿದರು


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ