Breaking News

ನಾವು ಗೆದ್ದೇ ಗೆಲ್ತೇವೆ ಮತ್ತೇ ಮೆಜಾರಿಟಿ ತಂದೇ ತರ್ತೇವೆ: ಫಿರೋಜ್ ಸೇಠ್ ವಿಶ್ವಾಸ

Spread the love

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದೇ ಗೆಲ್ಲುತ್ತೇವೆ ಮತ್ತು ಮೆಜಾರಿಟಿ ಪಡೆದು ಪಾಲಿಕೆ ಚುಕ್ಕಾಣಿ ಹಿಯುತ್ತೇವೆ ಎಂದು ಫಿರೋಜ್ ಸೇಠ್ ಹೇಳಿದ್ದಾರೆ. ನಾವು ಜನರಲ್ಲಿ ನಮ್ಮ ಅಭ್ಯರ್ಥಿಗಳಿಗೆ ಮತ ಹಾಕುವಂತೆ ಮನವರಿಕೆ ಮಾಡುತ್ತೇವೆ. ಈ ಹಿಂದೆ ನಮ್ಮ 10 ವರ್ಷಗಳ ಅಧಿಕಾರಾವಧಿಯಲ್ಲಿ ಮಾಡಿದಂತೆ ಈ ಬಾರಿಯೂ ಅಭಿವೃದ್ಧಿ ಕಾರ್ಯ ಮಾಡುತ್ತೇವೆ ಎಂದಿದ್ದಾರೆ.

feroz sait

ಎಂಐಎಂ ಸ್ಪರ್ಧೆಯಿಂದ ಬಿಜೆಪಿಗೆ ಲಾಭವಾಗುತ್ತೆ ಎನ್ನುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ ಇದು ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ನಡೆದಿದೆ. ಮತ್ತು ಅಲ್ಲಿ ಏನಾಯಿತು ಎಂಬುದು ನಿಮ್ಮೆಲ್ಲರಿಗೂ ಗೊತ್ತು. ಅಷ್ಟೇ ಇಲ್ಲಿಯೂ ಆಗುತ್ತೆ. ಕರ್ನಾಟಕ ಜನತೆ ಬುದ್ಧಿವಂತರಾಗಿದ್ದು, ಯೋಚನೆ ಮಾಡಿ ಮತ ಹಾಕುತ್ತಾರೆ ಎಂದು ನುಡಿದಿದ್ದಾರೆ.

ಸೇಠ್ ಕೇವಲ ಹಿಂದೂ ಮುಸ್ಲಿಂ ಎಂದು ಚುನಾವಣೆ ಮಾಡದೇ ಭಾರತೀಯರು ಎನ್ನುವ ಅಜಂಡಾ ಮೇಲೆ ಚುನಾವಣೆ ಮಾಡಲು ನಿರ್ಧರಿಸಿದ್ದು, ಜನ ನಮ್ಮನ್ನು ಆಶೀರ್ವದಿಸುತ್ತಾರೆ ಎಂದು ಹೇಳಿದ್ದಾರೆ. ಆದರೆ ಜನರ ಚಿತ್ತ ಯಾರತ್ತ? ಎನ್ನುವುದನ್ನು ಮಾತ್ರ ಕಾದು ನೋಡಬೇಕಿದೆ.

Spread the love

About Laxminews 24x7

Check Also

ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ ಪ್ರತಿಟಭಟನೆ.

Spread the love ಹುಕ್ಕೇರಿ : ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರ ಅವಹೇಳನೆ ಖಂಡಿಸಿ ಹುಕ್ಕೇರಿ ಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ