ಬೆಂಗಳೂರು: ಕೊರೊನಾ ಮೂರನೇ ಅಲೆ ಆತಂಕದ ನಡುವೆ ಇದೀಗ ನಿಫಾ ವೈರಸ್ ಭೀತಿ ಕೂಡ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ ಬಿಬಿಎಂಪಿ ಷರತ್ತುಗಳ ಮೇಲೆ ಷರತ್ತು ವಿಧಿಸಿದೆ.
ಸಾರ್ವಜನಿಕ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ 5 ದಿನಗಳ ಕಾಲ ಅವಕಾಶ ನೀಡಿತ್ತು. ಆದರೆ ಬಿಬಿಎಂಪಿ ಬೆಂಗಳೂರಿಗೆ ಪ್ರತ್ಯೇಕ ಗಣೇಶೋತ್ಸವ ಗೈಡ್ ಲೈನ್ ಪ್ರಕಟಿಸಿದ್ದು, 3 ದಿನಗಳು ಮಾತ್ರ ಗಣೇಶೋತ್ಸವ ಆಚರಿಸಲು ಅನುಮತಿ ನೀಡಿದೆ.
ಹೊಸ ಗೈಡ್ ಲೈನ್:
ವಾರ್ಡ್ ಗೆ 1 ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ
ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಆಯೋಜಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.
ಇನ್ಸ್ ಪೆಕ್ಟರ್, ಎಸಿಪಿಗಳು ಪರಿಶೀಲಿಸಿದ ಸ್ಥಳದಲ್ಲಿ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ
3 ದಿನಕ್ಕಿಂತ ಹೆಚ್ಚು ದಿನ ಗಣೇಶ ಮೂರ್ತಿ ಇಡುವಂತಿಲ್ಲ
ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಬಿಎಂಪಿ, ಸ್ಥಳೀಯ ಪೊಲೀಸರ ಅನುಮತಿ ಕಡ್ಡಾಯ
ಗಣೇಶ ಮೂರ್ತಿಯನ್ನು ಮೊಬೈಲ್ ಟ್ಯಾಂಕ್ ಅಥವಾ ಕೃತಕ ವಿಸರ್ಜನಾ ಕೇಂದ್ರದಲ್ಲಿ ಮಾತ್ರ ವಿಸರ್ಜನೆ ಮಾಡಬೇಕು
ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ನಿರ್ಬಂಧ
Laxmi News 24×7