Breaking News
Home / ರಾಜಕೀಯ / ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು: ರಾಜ್ಯದ ರೈತರಿಗೆ ಬೆಳೆ ವಿಮೆ ಸೌಲಭ್ಯಪಡೆದುಕೊಳ್ಳುವ ಪಾಠ ಹೇಳಿಕೊಡುವ ಮೂಲಕ ರೈತಾಪಿ ಸಮುದಾಯದ ಅಭಿವೃದ್ಧಿಗೆ ಮಾಜಿ ಸಚಿವ ಸಿ.ಎಂ. ಉದಾಸಿ ನೀಡಿರುವ ಕೊಡುಗೆ ಮರೆಯಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸಭೆಯಲ್ಲಿಂದು ಸಂತಾಪ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು , ಉದಾಸಿ ಆಗಲಿಕೆ ನನ್ನ ಪಾಲಿಗೆ ಬಹಳ ದೊಡ್ಡ ನಷ್ಟವಾಗಿದೆ. ತಂದೆ ಸಮಾನ ರಾಗಿದ್ದ ಉದಾಸಿ ನನ್ನ ರಾಜಕೀಯ ಜೀವನದ ಬೆಳವಣಿಗೆಯಲ್ಲೂ ಬಹಳ ಪ್ರಮುಖ ಪಾತ್ರ ವಹಿಸಿದ್ದಾರೆ ಅವರು ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ಮರೆಯಲು ಸಾಧ್ಯವೇ ಇಲ್ಲ ಎಂದು ಕೊಂಡಾಡಿದರು.

ಹಾವೇರಿ ಜಿಲ್ಲೆಯ ಸ್ಥಾಪನೆಯಲ್ಲಿ ಅವರು ನಿರ್ವಹಿಸಿದ ಪಾತ್ರವನ್ನು ಮರೆಯಲಾಗದು ಸಾಧ್ಯವಿಲ್ಲ. 7 ಭಾಷೆಗಳ ಮೇಲೆ ಹಿಡಿತ ಹೊಂದಿದ್ದ ಅವರು ನಿರಂತರವಾಗಿ ಕಲಿಯುವ ಮತ್ತು ಅಧ್ಯಯನ ಆಸಕ್ತಿಯನ್ನು ಹೊಂದಿದ್ದರು ಅವರ ಕೈ ಬರವಣಿಗೆ, ಹಸ್ತಾಕ್ಷರ, ಬಹಳ ಸುಂದರವಾಗಿತ್ತು ನೇರವಾಗಿ ಹೇಳಬೇಕೆಂದರೆ ಮುತ್ತು ಜೋಡಿಸಿದಂತೆ ಕಾಣುತ್ತಿತ್ತು ಅವರ ಹಸ್ತಾಕ್ಷರ ವೇ ಅವರ ಬದುಕಿನ ಮುಖ ಪರಿಚಯ ತೆರೆದಿಡುತ್ತದೆ ಎಂಬ ಮಾತನ್ನು ಮುಖ್ಯಮಂತ್ರಿ ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ