Breaking News
Home / ರಾಜ್ಯ / ಅನ್ನಭಾಗ್ಯ ಪಡಿತರ ಅಕ್ಕಿ ವಿತರಣೆಯಲ್ಲಿ ವ್ಯತ್ಯಾಸ : ಅಧಿಕಾರಿಗಳಿಂದ ಲೆಕ್ಕ ಪರಿಶೀಲನೆ

ಅನ್ನಭಾಗ್ಯ ಪಡಿತರ ಅಕ್ಕಿ ವಿತರಣೆಯಲ್ಲಿ ವ್ಯತ್ಯಾಸ : ಅಧಿಕಾರಿಗಳಿಂದ ಲೆಕ್ಕ ಪರಿಶೀಲನೆ

Spread the love

ಗಂಗಾವತಿ : ಗಂಗಾವತಿ, ಕನಕಗಿರಿ, ಕಾರಟಗಿ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದ ನ್ಯಾಯಬೆಲೆ ಅಂಗಡಿಗಳಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ವಿತರಣೆ ಲೆಕ್ಕದಲ್ಲಿ ವ್ಯತ್ಯಾಸ ಕಂಡುಬಂದಿದ್ದರಿಂದ ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಪಂಜಾಬ್ ಎಫ್ಸಿಐ ಗೋಡೌನ್ ಸೇರಿದಂತೆ ಅಕ್ಕಿ ವಿತರಣೆ ಮಾಡುವ ಸ್ಥಳಗಳ ಮೇಲೆ ದಾಳಿ ಮಾಡಿ ಲೆಕ್ಕ ಪರಿಶೋಧನೆ ನಡೆಸಿದ ಪ್ರಕರಣ ಗಂಗಾವತಿ ನಗರದಲ್ಲಿ ಮಂಗಳವಾರ ಜರುಗಿದೆ.

ತಾಲೂಕಿನ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ ಮಾಡುವ ಅನ್ನಭಾಗ್ಯದ ಅಕ್ಕಿ ಚೀಲಗಳಲ್ಲಿ ವ್ಯತ್ಯಾಸ ಕಂಡುಬಂದಿದ್ದು ಗೋದಾಮುಗಳಿಂದ ನೇರವಾಗಿ ಕೆಲವು ರೈಸ್ ಮಿಲ್ ಗಳಿಗೆ ಪಡಿತರ ಅಕ್ಕಿ ಚೀಲಗಳು ಹೋಗುವ ಕುರಿತು ಖಚಿತ ದೂರು ಬಂದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ, ತಹಶೀಲ್ಧಾರ್ ಯು ನಾಗರಾಜ, ಪೌರಾಯುಕ್ತ ಅರವಿಂದ ಜಮಖಂಡಿ ಹಾಗೂ ತಾಲ್ಲೂಕು ಮಟ್ಟದ ಎಲ್ಲ ಅಧಿಕಾರಿಗಳು ಗೋಡೌನ್ ಗೆ ಭೇಟಿ ನೀಡಿ ರಾಜ್ಯ ವೇರ್ ಹೌಸ್ ನಿಂದ ಸಂಗ್ರಹ ಚೀಲಗಳು ಮತ್ತು ವಿತರಣೆಯಾಗಿದ್ದ ಅಕ್ಕಿ ಚೀಲಗಳು ಪೂರೈಕೆಯಾಗಿದ್ದ ಬಗ್ಗೆ ಸಮಗ್ರ ಲೆಕ್ಕ ಪರಿಶೋಧನೆ ನಡೆಸಿದ್ದಾರೆ. ಗೋಡೋನ್ ನಲ್ಲಿರುವ ಸಂಗ್ರಹ ಮತ್ತು ನ್ಯಾಯಬೆಲೆ ಅಂಗಡಿಗಳಿಗೆ ಪೂರೈಕೆ ಆಗಿರುವ ಚೀಲಗಳ ವಿವರ ಸಂಗ್ರಹಿಸಲಾಗುತ್ತಿದೆ.

ಜಿಲ್ಲಾಮಟ್ಟದಿಂದ ತಾಲೂಕು ಮಟ್ಟದ ಗೋದಾಮಗಳಿಗೆ ಅಕ್ಕಿ ಚೀಲಗಳನ್ನು ಸಾಗಿಸುವ ಕೆಲವು ಲಾರಿಗಳು ನೇರವಾಗಿ ರೈಸ್ ಮಿಲ್ ಗಳಿಗೆ ಮತ್ತು ಅನ್ಯ ರಾಜ್ಯಗಳಿಗೆ ಅಕ್ಕಿ ಚೀಲಗಳನ್ನು ತುಂಬಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದೆ ಎಂಬ ಆರೋಪ ಕೆಲವರು ಮಾಡಿದ್ದರು.

ಸಂಜೆಯ ನಂತರ ಮಾಹಿತಿ : ತಾಲ್ಲೂಕಿಗೆ ವಿತರಣೆಯಾಗಿರುವ ಅಕ್ಕಿಚೀಲಗಳ ಮತ್ತು ಗೋದಾಮುಗಳಿಂದ ಪೂರೈಕೆಯಾಗಿರುವ ಅಕ್ಕಿಚೀಲಗಳ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಮತ್ತು ಖಚಿತ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿ ಲೆಕ್ಕಪರಿಶೋಧನೆ ಮಾಡಲಾಗುತ್ತಿದೆ. ಸಂಜೆ ವೇಳೆ ಮಾಹಿತಿ ನೀಡಲಾಗವುದು ಎಂದು ಸಹಾಯಕ ಆಯುಕ್ತ ನಾರಾಯಣರೆಡ್ಡಿ ಕನಕರೆಡ್ಡಿ ಉದಯವಾಣಿಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ