Breaking News

ಸಿದ್ದರಾಮಯ್ಯ ದೆಹಲಿಗೆ ಹೋಗಬೇಕು – ಸದನದಲ್ಲಿ ಸ್ವಾರಸ್ಯಕರ ಚರ್ಚೆ

Spread the love

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದೆಹಲಿಗೆ ಹೋಗುವ ವಿಚಾರದಲ್ಲಿ ಸ್ವಾರಸ್ಯಕರ ಚರ್ಚೆಯೊಂದು ನಡೆಯಿತು.

ಸಿದ್ದರಾಮಯ್ಯ ದೆಹಲಿ ರಾಜಕಾರಣಕ್ಕೆ ಹೋಗಬೇಕು. ಅಲ್ಲಿ ಕರ್ನಾಟಕದ ಕಹಳೆ ಮೊಳಗಿಸಬೇಕು ಎಂದು ಸಚಿವ ಮಾಧುಸ್ವಾಮಿ ಚರ್ಚೆ ಆರಂಭಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ಆರ್ ಅಶೋಕ್ ಇಲ್ಲ, ಇಲ್ಲ ಸಿದ್ದರಾಮಯ್ಯ ನಮಗೆ ಇಲ್ಲಿಯೇ ಇರಬೇಕು. ನಮಗೆ ಮಾರ್ಗದರ್ಶನ ಕೊಡಬೇಕು. ಹೀಗಾಗಿ ನಾವು ಅವರನ್ನು ದೆಹಲಿಗೆ ಕಳುಹಿಸಲು ಇಷ್ಟಪಡುವುದಿಲ್ಲ ಅಂದರು. ಇದನ್ನು ಕೇಳಿಸಿಕೊಂಡ ಸಿದ್ದರಾಮಯ್ಯ ಆಶೋಕ್ ಮತ್ತು ಮಾಧುಸ್ವಾಮಿ ಇಬ್ಬರೂ ಕೂಡ ನನ್ನ ಉತ್ತಮ ಸ್ನೇಹಿತರು ಎಂದು ಹೇಳಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸಿದ್ದರಾಮಯ್ಯ ದೆಹಲಿ ರಾಜಕಾರಣಕ್ಕೆ ತೆರಳುವ ಬಗ್ಗೆ ಈಶ್ವರಪ್ಪ ಅವರ ಅಭಿಪ್ರಾಯ ಏನು ಎಂದು ಪ್ರಶ್ನಿಸುವ ಮೂಲಕ ಅವರನ್ನು ಚರ್ಚೆಗೆ ಎಳೆದರು. ಇದಕ್ಕೆ ಸಿದ್ದರಾಮಯ್ಯ, ಅವರನ್ನು ಕೇಳಬೇಡಿ. ಇಲ್ಲೂ ಬೇಡ ಅಲ್ಲೂ ಬೇಡ ಎನ್ನುತ್ತಾರೆ ಎಂದು ಸಿದ್ದರಾಮಯ್ಯ ಹಾಸ್ಯ ಚಟಾಕಿ ಹಾರಿಸಿದರು. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಭ್ರಷ್ಟಾಚಾರ ಆರೋಪ – ಚರ್ಚೆಗೆ ಆಗ್ರಹಿಸಿ ಸಾರಾ ಮಹೇಶ್ ಪ್ರತಿಭಟನೆ

ಈ ವೇಳೆ ನಿಮ್ಮ ಹೃದಯ ಮುಟ್ಟಿಕೊಂಡು ಹೇಳಿ ನಾನು ಆ ರೀತಿ ಹೇಳ್ತೀನಾ ಎಂದು ಈಶ್ವರಪ್ಪ, ಸಿದ್ದರಾಮಯ್ಯನವರಿಗೆ ಪ್ರಶ್ನೆ ಮಾಡಿದರು. ನಾನು ಆಂತರಿಕವಾಗಿಯೂ ಹೇಳಲ್ಲ. ಬಹಿರಂಗವಾಗಿಯೂ ಹೇಳಲ್ಲ ಎಂದು ಸಿದ್ದರಾಮಯ್ಯ ಮತ್ತೆ ಈಶ್ವರಪ್ಪನವರ ಕಾಲೆಳೆದರು. ಇದನ್ನು ಕೇಳಿಸಿಕೊಂಡ ಈಶ್ವರಪ್ಪ ನೋಡಿ ಇದೊಂದು ನಿಜ ಹೇಳಿದ್ದೀರಿ ಎಂದರು. ರಾಜಕಾರಣಿ ಆದ ಮೇಲೆ ಸುಳ್ಳು ಹೇಳುವ ಅನಿವಾರ್ಯತೆ ಬರುತ್ತೆ. ಹೇಳಿರಬಹುದು ಆದರೆ ಸುಳ್ಳು ಹೇಳಿಲ್ಲ ಎನ್ನುವುದು ಆತ್ಮವಂಚನೆ ಆಗುತ್ತದೆ ಎಂದು ಸಿದ್ದರಾಮಯ್ಯ ನುಡಿದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ