Breaking News

ಹುಟ್ಟುಹಬ್ಬದ ದಿನದಂದೇ ವಿದ್ಯುತ್‌ ಸ್ಪರ್ಶಿಸಿ ಮಗು ಸಾವು

Spread the love

ಚಾಮರಾಜನಗರ: ತಾಲ್ಲೂಕಿನ ಕೆಂಗಾಕಿ ಗ್ರಾಮದಲ್ಲಿ ಮೂರು ವರ್ಷ ಹೆಣ್ಣು ಮಗುವೊಂದು ಹುಟ್ಟುಹಬ್ಬದ ದಿನವಾದ ಬುಧವಾರ ವಿದ್ಯುತ್‌ ಸ್ಪರ್ಶದಿಂದಾಗಿ ಮೃತಪಟ್ಟಿದೆ.

ಗ್ರಾಮದ ಸಿದ್ಧಲಿಂಗಸ್ವಾಮಿ ಎಂಬುವವರ ಮಗಳು ನಿವೇದಿತಾ ಮೃತಪಟ್ಟ ದುರ್ದೈವಿ. ಬುಧವಾರವೇ ಆಕೆಯ ಹುಟ್ಟುಹಬ್ಬ ಇತ್ತು.

‘ಸಿದ್ಧಲಿಂಗಸ್ವಾಮಿ ಅವರ ಜಮೀನಿನಲ್ಲಿ ಮಧ್ಯಾಹ್ನ 3.30ರ ಸುಮಾರಿಗೆ ಘಟನೆ ನಡೆದಿದೆ. ಆಟವಾಡುತ್ತಿದ್ದ ಮಗು ಜಮೀನಿನಲ್ಲಿದ್ದ ಪಂಪ್‌ ಸ್ಟಾರ್ಟರ್‌ ಹತ್ತಿರ ಹೋಗಿದೆ. ಹೇಗೆ ವಿದ್ಯುತ್‌ ಸ್ಪರ್ಶ ಆಯಿತು ಎಂಬುದು ಪೋಷಕರಿಗೂ ಗೊತ್ತಿಲ್ಲ. ಅಸ್ವಸ್ಥಗೊಂಡಿದ್ದ ಮಗುವನ್ನು ಕಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಮಗು ಕೊನೆಯುಸಿರೆಳೆದಿದೆ’ ಎಂದು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್‌ ಪುಟ್ಟಸ್ವಾಮಿ ಅವರು ತಿಳಿಸಿದರು.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ