Breaking News

ಬೈಕ್ ಸವಾರನ ಎಡವ‌ಟ್ಟು: ಇನ್ನೊಬ್ಬ ಸವಾರನ ಕೈಮೇಲೆ ಹರಿದ ಲಾರಿ ಚಕ್ರ

Spread the love

ಚಿಕ್ಕಮಗಳೂರು: ಫೋನ್‌ನಲ್ಲಿ ಮಾತಾಡಿಕೊಂಡು ಬಂದ ಬೈಕ್ ಸವಾರನ ಎಡವಟ್ಟಿನಿಂದಾಗಿ ಎದುರಿಗೆ ಬರುತ್ತಿದ್ದ ಮತ್ತೊಂದು ಬೈಕ್‌ ಸವಾರನ ಕೈಮೇಲೆ ಲಾರಿ ಚಕ್ರ ಹರಿದು ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಏಕಮುಖ ಸಂಚಾರದಲ್ಲಿ ಫೋನ್ ನಲ್ಲಿ ಮಾತನಾಡಿಕೊಂಡು ಬರುತ್ತಿದ್ದ ಬೈಕ್ ಸವಾರ ಎದುರಿಗೆ ಬರುತ್ತಿದ್ದ ಮತ್ತೊಂದು ಬೈಕ್‌ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾಗುತ್ತಿದ್ದಂತೆ ಕೆಳಗೆ ಬಿದ್ದ ಮತ್ತೊಂದು ಬೈಕ್ ಸವಾರನ ಕೈಮೇಲೆ ಲಾರಿ ಚಕ್ರ ಹರಿದಿದ್ದು, ಸವಾರ ಸುಂದರ್ ಎಡಗೈಗೆ ಗಂಭೀರ ಗಾಯಗಳಾಗಿವೆ. ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ, ಕಾಂಗ್ರೆಸ್ ಕಚೇರಿ ಮುಂಭಾಗ ನಡೆದ ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ