Breaking News

ಜಿಎಸ್​ಟಿ ಮಂಡಳಿ ಸಭೆ: ಕೈಗೊಂಡ ಪ್ರಮುಖ ನಿರ್ಣಯಗಳು ಇಲ್ಲಿವೆ, ಓದಿ

Spread the love

 

 

ದೆಹಲಿ: ಉತ್ತರ ಪ್ರದೇಶದ ಲಖನೌನಲ್ಲಿ 45ನೇ ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ ಕೊರೊನಾ ಲಸಿಕೆ ಸಂಬಂಧಿತ ಔಷಧಗಳ ಮೇಲೆ ಜಿಎಸ್​ಟಿ ವಿನಾಯಿತಿಯನ್ನು ಡಿಸೆಂಬರ್ 31ರವರೆಗೆ  ಮುಂದುವರಿಸಲು ನಿರ್ಧರಿಸಲಾಯಿತು. ಕಬ್ಬಿಣ, ಮ್ಯಾಂಗನೀಸ್, ತಾಮ್ರ, ನಿಕಲ್, ಕೋಬಾಲ್ಟ್, ಅಲ್ಯೂಮಿನಿಯಂ, ಸೀಸ, ಸತು, ತವರ, ಕ್ರೋಮಿಯಂ – ಅದಿರು ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 5 ರಿಂದ ಶೇಕೆಡಾ 18 ಕ್ಕೆ ಹೆಚ್ಚಿಸಲು ಜಿಎಎಸ್​ಟಿ ಕೌನ್ಸಿಲ್ ಅನುಮೋದನೆ ನೀಡಿತು.

ತೆಂಗಿನ ಎಣ್ಣೆ ಮೇಲೆ ಜಿಎಸ್​ಟಿ ವಿಧಿಸುವ ವಿಚಾರವಾಗಿ ಹೆಚ್ಚಿನ ಅಧ್ಯಯನಕ್ಕೆ ಪ್ರಸ್ತಾವನೆಯನ್ನು ಜಿಎಸ್​ಟಿ ಮಂಡಳಿ ತಡೆ ಹಿಡಿಯಿತು. ಒಂದು ಲೀಟರ್​ಗಿಂತ  ಕಡಿಮೆ ತೆಂಗಿನ ಎಣ್ಣೆಗೆ ಕೂದಲಿಗೆ ಹಚ್ಚುವ ಎಣ್ಣೆ ಎಂದು ವರ್ಗಿಕರಿಸಿ ಶೇಕಡಾ 18 ಜಿಎಸ್​ಟಿ, ಒಂದು ಲೀಟರ್​ಗಿಂತ ಹೆಚ್ಚಿನ ತೆಂಗಿನ ಎಣ್ಣೆಗೆ ಶೇಕಡಾ 5 ಜಿಎಸ್​ಟಿ ವಿಧಿಸಲು ಮಂಡಳಿ ನಿರ್ಧರಿಸಿತು. ಹಣ್ಣಿನ ಜ್ಯೂಸ್‌ಗಳ ಮೇಲೆ ಶೇ.12ರಷ್ಟು ಪರಿಹಾರದೊಂದಿಗೆ ಜಿಎಸ್‌ಟಿ ಶೇಕಡಾ 28ಕ್ಕೆ ಏರಿಸಲು ನಿರ್ಣಯಿಸಲಾಯಿತು.

ದೆಹಲಿ: ಉತ್ತರ ಪ್ರದೇಶದ ಲಖನೌನಲ್ಲಿ 45ನೇ ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ ಕೊರೊನಾ ಲಸಿಕೆ ಸಂಬಂಧಿತ ಔಷಧಗಳ ಮೇಲೆ ಜಿಎಸ್​ಟಿ ವಿನಾಯಿತಿಯನ್ನು ಡಿಸೆಂಬರ್ 31ರವರೆಗೆ  ಮುಂದುವರಿಸಲು ನಿರ್ಧರಿಸಲಾಯಿತು. ಕಬ್ಬಿಣ, ಮ್ಯಾಂಗನೀಸ್, ತಾಮ್ರ, ನಿಕಲ್, ಕೋಬಾಲ್ಟ್, ಅಲ್ಯೂಮಿನಿಯಂ, ಸೀಸ, ಸತು, ತವರ, ಕ್ರೋಮಿಯಂ – ಅದಿರು ಮೇಲಿನ ಜಿಎಸ್‌ಟಿ ದರವನ್ನು ಶೇಕಡಾ 5 ರಿಂದ ಶೇಕೆಡಾ 18 ಕ್ಕೆ ಹೆಚ್ಚಿಸಲು ಜಿಎಎಸ್​ಟಿ ಕೌನ್ಸಿಲ್ ಅನುಮೋದನೆ ನೀಡಿತು.

ತೆಂಗಿನ ಎಣ್ಣೆ ಮೇಲೆ ಜಿಎಸ್​ಟಿ ವಿಧಿಸುವ ವಿಚಾರವಾಗಿ ಹೆಚ್ಚಿನ ಅಧ್ಯಯನಕ್ಕೆ ಪ್ರಸ್ತಾವನೆಯನ್ನು ಜಿಎಸ್​ಟಿ ಮಂಡಳಿ ತಡೆ ಹಿಡಿಯಿತು. ಒಂದು ಲೀಟರ್​ಗಿಂತ  ಕಡಿಮೆ ತೆಂಗಿನ ಎಣ್ಣೆಗೆ ಕೂದಲಿಗೆ ಹಚ್ಚುವ ಎಣ್ಣೆ ಎಂದು ವರ್ಗಿಕರಿಸಿ ಶೇಕಡಾ 18 ಜಿಎಸ್​ಟಿ, ಒಂದು ಲೀಟರ್​ಗಿಂತ ಹೆಚ್ಚಿನ ತೆಂಗಿನ ಎಣ್ಣೆಗೆ ಶೇಕಡಾ 5 ಜಿಎಸ್​ಟಿ ವಿಧಿಸಲು ಮಂಡಳಿ ನಿರ್ಧರಿಸಿತು. ಹಣ್ಣಿನ ಜ್ಯೂಸ್‌ಗಳ ಮೇಲೆ ಶೇ.12ರಷ್ಟು ಪರಿಹಾರದೊಂದಿಗೆ ಜಿಎಸ್‌ಟಿ ಶೇಕಡಾ 28ಕ್ಕೆ ಏರಿಸಲು ನಿರ್ಣಯಿಸಲಾಯಿತು.

ಆಂಫೋಟೆರಿಸಿನ್, ಟೋಸಿಲಿಜುಮಾಬ್ ಮೇಲೆ ಜಿಎಸ್ಟಿ ವಿಧಿಸಿಲ್ಲ. ರೆಮ್ಡಿಸಿವಿರ್, ಹೆಪರಿನ್ ಮೇಲೆ ಶೇ. 5ರಷ್ಟು ಜಿಎಸ್‌ಟಿ, ಇಟೋಲಿಜುಮಾಬ್, ಪೋಸಕೋಜೋಲ್, ಪವಿಪಿರವಿರ್, ಕಾಸಿರಿವಿಮಬ್, ಇಂಡಿವಿಮಬ್, ಡಿಯೋಕ್ಸಿ ಡಿ ಗ್ಲೂಕೋಸ್ ಮೇಲಿನ ಜಿಎಸ್‌ಟಿ ಶೇಕಡಾ 12 ರಿಂದ ಶೇಕಡಾ 5ಕ್ಕೆ ಇಳಿಸಲು ನಿರ್ಣಯಿಸಲಾಯಿತು.


Spread the love

About Laxminews 24x7

Check Also

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ– -ಎಸಿಪಿ ನಾರಾಯಣ ಬರಮನಿ

Spread the love ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ