Breaking News

ಯಡಿಯೂರಪ್ಪ ರಾಜ್ಯ ಪ್ರವಾಸಕ್ಕೆ ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ; ಅರುಣ್ ಸಿಂಗ್

Spread the love

ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಆರಂಭಿಸಲು ಗ್ರೀನ್ ಸಿಗ್ನಲ್ ನೀಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಬಿಜೆಪಿಯ ಹಿರಿಯ ನಾಯಕರು. ಅವರು ಪ್ರವಾಸ ಮಾಡಬಹುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಅವರು ದಾವಣಗೆರೆಯಲ್ಲಿ ನಡೆಯುತ್ತಿರುವ ಪಕ್ಷದ ಕಾರ್ಯಕಾರಿಯಲ್ಲಿ ಗ್ರೀನ್​ ಸಿಗ್ನಲ್​ ನೀಡಿದ್ದಾರೆ.

ಈಗಾಗಲೇ ಬಗ್ಗೆ ಹಲವಾರ ಸಲ ಹೇಳಿರುವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತ್ರತ್ವದಲ್ಲಿ ಒಳ್ಳೆಯ ಕೆಲ್ಸ ನಡೆಯುತ್ತಿದೆ. ಸಮಾಜದ ಎಲ್ಲ ಜನಾಂಗದ ಬಗ್ಗೆ ಗಮನ ಹರಿಸುತ್ತಿದ್ದಾರೆ. ಜನರಿಗೆ ಅನುಕೂಲ ಆಗುವ ಕೆಲ್ಸಾ ಮಾಡುತ್ತಿದ್ದಾರೆ. ಎರಡು ದಿನಗಳ ದಾವಣಗೆರೆ ಸಭೆಯಲ್ಲಿ ಪಕ್ಷದ ವಿಚಾರ ಚಿಂತನೆ ನಡೆಯಲಿದೆ. ಬಸವರಾಜ ಬೊಮ್ಮಾಯಿ ನೇತ್ರತ್ವದಲ್ಲಿಯೇ ಚುನಾವಣೆ ಎಂದೇ ಈಗಾಗಲೇ ಹೇಳಿರುವೆ ಎಂದು ಅರುಣ್ ಸಿಂಗ್ ಪುನರುಚ್ಚರಿಸಿದರು.

ಸಿದ್ದರಾಮಯ್ಯ ದೇವಸ್ಥಾನದ ಬದಲು ಮಸೀದಿ ಬಗ್ಗೆ ಮಾತಾಡುತ್ತಾರೆ. ಕಾಂಗ್ರೆಸ್ ನಾಯಕ ದೇವಸ್ಥಾನದ ಬಗ್ಗೆ ಮಾತಾಡುತ್ತಾರೆ. ಬಿಜೆಪಿ ದೇವಸ್ಥಾನ ನಿರ್ಮಿಸುತ್ತದೆ. ದೇವಸ್ಥಾನ ಉಳಿಸುವ ಕೆಲ್ಸಾ ಮಾಡುತ್ತಿದೆ. ದೇವಸ್ಥಾನಗಳ ಬಗ್ಗೆ ಸಿದ್ದರಾಮಯ್ಯ ಅವರು ಈಗ ಮಾತಾಡುತ್ತಿದ್ದಾರೆ. ಆದರೆ ಅವರು ಮಸೀದಿಗಳ ಬಗ್ಗೆ ಹೆಚ್ಚು ಮಾತಾಡುತ್ತಾರೆ ಅಲ್ವಾ? ಎಂದು ಸಿದ್ದರಾಮಯ್ಯ ಬಗ್ಗೆ ಅರುಣ್ ಸಿಂಗ್ ವ್ಯಂಗ್ಯವಾಡಿದರು.


Spread the love

About Laxminews 24x7

Check Also

ಸಚಿವ ತಿಮ್ಮಾಪುರ ವಜಾ ಮಾಡದಿದ್ದರೆ ಸಿಎಂಗೆ 85% ಕಮಿಷನ್ ಹೋಗಿದೆ ಎಂದರ್ಥ: ಆರ್. ಅಶೋಕ್

Spread the loveಬೆಂಗಳೂರು: ಸಿದ್ದರಾಮಯ್ಯನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯುತ್ತಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರನ್ನು ವಜಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ