Breaking News

ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ, ಸಂದರ್ಭ ಬಂದರೆ ದೇವೇಗೌಡರನ್ನ ಕೇಳೋದ್ರಲ್ಲಿ ತಪ್ಪಿಲ್ಲ: ರಾಮುಲು

Spread the love

ಚಿತ್ರದುರ್ಗ: 2023 ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಎಂಬ ಸ್ಪಷ್ಟತೆ ಇದೆ. ಹಾಗಾಗಿ ಒಂದೊಮ್ಮೆ ಅಂತಹ ಸಂದರ್ಭ ಬಂದರೆ ದೇವೇಗೌಡರನ್ನು ಕೇಳುವುದರಲ್ಲಿ ತಪ್ಪಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

2023ಕ್ಕೆ ಎರಡೂ ಪಕ್ಷಗಳು ಜೆಡಿಎಸ್ ಮನೆ ಬಾಗಿಲಿಗೆ ಬರಲಿವೆ ಎಂಬ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹೇಳಿಕೆಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಶ್ರೀರಾಮುಲು, ಅಂತಹ ಸಂದರ್ಭ ಬಂದರೆ ದೇವೇಗೌಡರನ್ನು ಕೇಳಿದರೆ ತಪ್ಪಿಲ್ಲ. ಈ ಬಗ್ಗೆ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ನಾಯಕರು ಜೆಡಿಎಸ್ ಮನೆ ಬಾಗಿಲಿಗೆ ಹೋಗುವ ಬಗ್ಗೆ ತೀರ್ಮಾನಿಸುತ್ತಾರೆ ಎಂದಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಶ್ರೀರಾಮುಲು, ಸಿದ್ದರಾಮಯ್ಯ ಕುಮಾರವ್ಯಾಸರ ಪದ್ಯ ಉಲ್ಲೇಖಿಸಿ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ಟೀಕಿಸಿದ್ದಾರೆ. ಆದರೆ ಆ ಪದ್ಯ ನಮಗೆ ಅನ್ವಯವಾಗಲ್ಲ. ದೇಶದಲ್ಲಿ ಭ್ರಷ್ಟಾಚಾರ ಹೆಚ್ಚಾಗಲು ಕಾಂಗ್ರೆಸ್ ಕಾರಣ. ಭಾರತ ಆರ್ಥಿಕವಾಗಿ ಹಿಂದುಳಿಯಲೂ, ನಿರುದ್ಯೋಗ ಸಮಸ್ಯೆ ಎದುರಾಗಲು ಕಾಂಗ್ರೆಸ್ ಕಾರಣ. ಕಾಂಗ್ರೆಸ್ ನಲ್ಲಿ ಭ್ರಷ್ಟರು, ಲೂಟಿಕೋರರು ಇದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ