Breaking News

ಕಾಂಗ್ರೆಸ್‌ನ ಚುನಾವಣಾ ತಂತ್ರದ ಬಗ್ಗೆ ದಲಿತರು ಎಚ್ಚರದಿಂದಿರಬೇಕು: ಬಿಎಸ್​​ಪಿ ನಾಯಕಿ ಮಾಯಾವತಿ

Spread the love

ಲಕ್ನೊ: ಚರಣ್ ಜಿತ್ ಛನ್ನಿ(Charanjit Singh Channi) ಪಂಜಾಬಿನ ಮೊದಲ ದಲಿತ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಬಿಎಸ್​​ಪಿ ಅಧ್ಯಕ್ಷೆ ಮಾಯಾವತಿ (Mayawati) ಸೋಮವಾರ ಕಾಂಗ್ರೆಸ್ ನ “ಚುನಾವಣಾ ತಂತ್ರ” ದ ಬಗ್ಗೆ ದಲಿತರು ಎಚ್ಚರದಿಂದರಬೇಕು ಎಂದು ಹೇಳಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಎಸ್‌ಎಡಿ-ಬಿಜೆಪಿ ಮೈತ್ರಿಯಿಂದ ಕಾಂಗ್ರೆಸ್ ಗಲಿಬಿಲಿಗೊಂಡಿದೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದ್ದಾರೆ.

ಕಾಂಗ್ರೆಸ್‌ಗೆ ಇನ್ನೂ ದಲಿತರ ಮೇಲೆ ನಂಬಿಕೆ ಇಲ್ಲ. ದಲಿತರು ಕಾಂಗ್ರೆಸ್​ನ ದ್ವಂದ್ವ ನಿಲುವುಗಳ ಬಗ್ಗೆ ಬಹಳ ಜಾಗರೂಕರಾಗಿರಬೇಕು. ದಲಿತರು ಈ ತಂತ್ರಕ್ಕೆ ಬೀಳಲಾರರು ಎಂದು ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಯಾವತಿ ಹೇಳಿದ್ದಾರೆ.

ಬಿಎಸ್‌ಪಿ ಅಧ್ಯಕ್ಷೆ ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆಯು ದಲಿತರಲ್ಲದ ನಾಯಕನ ನೇತೃತ್ವ ದಲ್ಲಿ ನಡೆಯುತ್ತದೆ. ಛನ್ನಿ ಅವರ ನೇತೃತ್ವದಲ್ಲಿ ಅಲ್ಲ ಎಂದು ತಿಳಿದುಬಂದಿದೆ. ವಾಸ್ತವವೆಂದರೆ ಕಾಂಗ್ರೆಸ್ ಹಾಗೂ ಇತರ ರಾಜಕೀಯ ಪಕ್ಷಗಳು ಬಿಕ್ಕಟ್ಟಿನ ಸಮಯದಲ್ಲಿ ಮಾತ್ರ ದಲಿತರ ಬಗ್ಗೆ ಯೋಚಿಸುತ್ತವೆ, ಛನ್ನಿಯನ್ನು ಮುಖ್ಯಮಂತ್ರಿ ಮಾಡಿರುವುಕಾಂಗ್ರೆಸ್ ನ ಚುನಾವಣಾ ತಂತ್ರ ಎಂದು ಅವರು ಆರೋಪಿಸಿದರು. ಛನ್ನಿ ಸೋಮವಾರ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಪಂಜಾಬ್‌ನ ಮಾಲ್ವಾ ಪಟ್ಟಿಯ ರೂಪನಗರ ಜಿಲ್ಲೆಯವರಾದ ಛನ್ನಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವ ಕಾಂಗ್ರೆಸ್ ನಿರ್ಧಾರವು ಮಹತ್ವವನ್ನು ಪಡೆದುಕೊಂಡಿದೆ. ಏಕೆಂದರೆ ರಾಜ್ಯದ ಶೇಕಡಾ 32 ರಷ್ಟು ಜನಸಂಖ್ಯೆಯು ದಲಿತರನ್ನು ಒಳಗೊಂಡಿದೆ. ಬಿಎಸ್‌ಪಿ ಮತ್ತು ಎಸ್‌ಎಡಿ ಜೂನ್ ನಲ್ಲಿ 2022 ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿವೆ.


Spread the love

About Laxminews 24x7

Check Also

ಎಲ್ಲ ಧರ್ಮಕ್ಕಿಂತ ಮಾನವ ಧರ್ಮವೇ ಮೇಲು: ಸಿಎಂ

Spread the loveಮೈಸೂರು: ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ ಎಂದು ಬಸವಣ್ಣನವರು ಧರ್ಮದ ಕುರಿತು ವ್ಯಾಖ್ಯಾನ ಮಾಡಿದ್ದಾರೆ. ಎಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ