Breaking News

ಸರ್ಕಾರಿ ಕಚೇರಿಗೆ ನುಗ್ಗಿ ಹಿರಿಯ ಕೆಎಎಸ್​ ಅಧಿಕಾರಿಗೆ ಕೊಲೆ ಬೆದರಿಕೆ ಆರೋಪ

Spread the love

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕರಾಗಿ ನೇಮಕಗೊಂಡಿರುವ ಕೆಎಎಸ್ ಅಧಿಕಾರಿ ಬಿ.ಕೆ.ನಾಗರಾಜಪ್ಪ ಅವರ ಮೇಲೆ ಕೊಲೆ ಬೆದರಿಕೆ ಕೇಳಿ ಬಂದಿದ್ದು ಸರ್ಕಾರಿ ಕಚೇರಿಗೆ ನುಗ್ಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಮಹಾಲಕ್ಷ್ಮಿ ಲೇಔಟ್ ನ ಭೋವಿ ಪಾಳ್ಯದಲ್ಲಿರುವ ಭೋವಿ ಅಭಿವೃದ್ಧಿ ನಿಗಮದ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಹಣ ಮಂಜೂರಾತಿ ಮಾಡುವಂತೆ ಧಮ್ಕಿ ಹಾಕಿರೋ ಆರೋಪಿಗಳು. ನಾವು ಹೇಳಿದ ವ್ಯಕ್ತಿಗಳಿಗೆ ಹಣ ಮಂಜೂರು ಮಾಡಬೇಕು. ಇಲ್ಲದಿದ್ದರೆ ಸರ್ಕಾರಿ ಕಚೇರಿಯಲ್ಲಿ ದೊಂಬಿ ಎಬ್ಬಿಸಿ ಕಚೇರಿಗೆ ಬೆಂಕಿ ಇಟ್ಟು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

 

ಸದ್ಯ ಆರೋಪಿಗಳಾದ ಟಿ. ಕುಮಾರ್ ಹಾಗೂ ಇತರರ ವಿರುದ್ದ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೆಎಎಸ್​ ಅಧಿಕಾರಿ ದೂರು ದಾಖಲಿಸಿದ್ದಾರೆ.


Spread the love

About Laxminews 24x7

Check Also

ಶಾಲಾ ಮಕ್ಕಳ ಆತ್ಮಹತ್ಯೆ ತಡೆಗೆ ನೀತಿ ಜಾರಿ – ಮಹದೇವಪ್ಪ

Spread the loveಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ, ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ