Breaking News

ಬೆಳಗಾವಿಯಲ್ಲಿ ಗಣೇಶ ವಿಸರ್ಜನೆ ವೇಳೆ ಗಲಾಟೆ; ಯುವಕನಿಗೆ ಚಾಕು ಇರಿತ

Spread the love

ಬೆಳಗಾವಿ: ಗಣೇಶ ವಿಸರ್ಜನೆಯ ಮೆರವಣಿಗೆ ನೋಡಲು ಬಂದ ಮಹಾರಾಷ್ಟ್ರದ ಮೂಲದ ಯುವಕನಿಗೆ ಕಿಡಿಗೇಡಿಗಳು ಚಾಕು ಇರಿದ ಘಟನೆ ಜಿಲ್ಲೆಯ ಸದಲಗಾ ಪಟ್ಟಣದಲ್ಲಿ ನಡದಿದೆ.

ಕೊಲ್ಹಾಪುರ ಮೂಲದ ವಿಶಾಲ್ ಶಿವಡೆ (27) ಚಾಕು ಇರಿತಕ್ಕೊಳಗಾದ ಯುವಕ. ಅಪರಿಚಿತ ಯುವಕರ ಗ್ಯಾಂಗ್ ನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದ್ದು, ಚಾಕು ಇರಿತದಿಂದ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಗಣೇಶ ವಿಸರ್ಜನೆ ಮೆರವಣಿಗೆ ವೀಕ್ಷಣೆಗೆ ಯುವಕ ಆತನ ಸ್ನೇಹಿತರು ಪಟ್ಟಣಕ್ಕೆ ಬಂದಿದ್ದು ಈ ವೇಳೆ ವೈಯಕ್ತಿಕ ದ್ವೇಷ ಹಿನ್ನೆಲೆ ಚಾಕು ಇರಿದು ಕಿಡಗೇಡಿಗಳು ಪರಾರಿಯಾಗಿದ್ದಾರೆ. ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಸ್ಥಳಕ್ಕೆ ಸದಲಗಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ