Breaking News

ದೇವರ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟಿದ್ದ ಯುವಕನಿಗೆ ಥಳಿತ!

Spread the love

ತುಮಕೂರು: ದೇವರ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಕಾಲಿಟ್ಟಿದ್ದ ಆರೋಪದಡಿ ಯುವಕನನ್ನು ಹಿಡಿದು ಗ್ರಾಮಸ್ಥರು ಥಳಿಸಿದ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಶ್ರೀಸ್ವಾಮಿ ಕೋಟೆ ಕಲ್ಲಪ್ಪನ ಮೂರ್ತಿ ಮೇಲೆ ಚಪ್ಪಲಿ ಧರಿಸಿ ಯುವಕ ಕಾಲಿಟ್ಟಿದ್ದ ವಿಡಿಯೊ ಸೋಷಿಯಲ್‍ ಮೀಡಿಯಾದಲ್ಲಿ ವೈರಲ್‍ ಆಗಿತ್ತು. ಯುವಕನ ವರ್ತನೆಗೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಯುವಕನ ವಿರುದ್ಧ ಮಧುಗಿರಿ ಠಾಣೆಗೆ ಗ್ರಾಮಸ್ಥರು ದೂರು ಸಲ್ಲಿಸಿದ್ದರು. ಸದ್ಯ ಆರೋಪಿ ಶ್ರೀಕಾಂತ್ ಎಂಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ