Breaking News

ಯುವತಿಯ ಸಂಕಲ್ಪಕ್ಕೆ ಸಂದ ಜಯ: ಗ್ರಾಮಕ್ಕೆ ರಸ್ತೆಯೂ ಆಯ್ತು, ಬಸ್ಸೂ ಬಂತು​.. ಮದ್ವೆಯೊಂದೇ ಬಾಕಿ..!

Spread the love

ದಾವಣಗೆರೆ: ಗ್ರಾಮದಲ್ಲಿ ರಸ್ತೆ ಆಗೋವರೆಗೂ ಮದುವೆಯಾಗಲ್ಲ ಎಂದು ಯುವತಿಯೊಬ್ಬಳು ಮಾಡಿದ ಸಂಕಲ್ಪಕ್ಕೆ ಫಲ ಸಿಕ್ಕಿದ್ದು ಗ್ರಾಮಕ್ಕೆ ರಸ್ತೆಯ ಜೊತೆ ಬಸ್​ ಕೂಡ ಆಗಮಿಸಿದ್ದು ಯವತಿ ಮಾಡಿದ ಸಂಕಲ್ಪದಿಂದ ಗ್ರಾಮದ ಬಹುದಿನಗಳ ಆಸೆ ಈಡೇರಿದಂತಾಗಿದೆ.

ಹೌದು ಜಿಲ್ಲೆಯ ಹೆಚ್​.ರಾಂಪುರದ ಯುವತಿಯೊಬ್ಬಳು ತನ್ನ ಗ್ರಾಮಕ್ಕೆ ರಸ್ತೆಯಾಗಬೇಕು ಅಲ್ಲಿಯವರೆಗೆ ತಾನು ಮದುವೆಯಾಗಲ್ಲ ಎಂದು ವಿಭಿನ್ನವಾಗಿ ತನ್ನ ಆಕ್ರೋಶ ಹೊರಹಾಕಿದ್ದಳು. ಈ ಕುರಿತು ನ್ಯೂಸ್​ಫಸ್ಟ್​ ಸೆಪ್ಟೆಂಬರ್​ 14 ರಂದು ವಿಸ್ತೃತ ವರದಿ ಬಿತ್ತರಿಸಿತ್ತು.

 

ವರದಿಯಿಂದ ಎಚ್ಚೆತ್ತುಕೊಂಡ ಜಿಲ್ಲಾಧಿಕಾರಿ ಗ್ರಾಮಕ್ಕೆ ಆಗಮಿಸಿ ಯುವತಿಯ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಜಿಲ್ಲಾಧಿಕಾರಿ ಗ್ರಾಮಕ್ಕೆ ಭೆಟಿ ನೀಡಿದ 2 ದಿನಗಳ ಬಳಿಕ ರಸ್ತೆ ಕಾಮಗಾರಿ ಆರಂಭವಾಗಿದ್ದು, ಅದರ ಜೊತೆಗೆ ಇದೀಗ ಗ್ರಾಮಕ್ಕೆ ಬಸ್​ ಸಂಚಾರ ಕೂಡ ಆರಂಭವಾಗಿದೆ. ರಸ್ತೆ ಮತ್ತು ಬಸ್​ ಆಗಮನದಿಂದ ಗ್ರಾಮಸ್ಥರ ಮೊಗದಲ್ಲಿ ಹರ್ಷ ಮೂಡಿದೆ. ಬಸ್​ಗೆ ಪೂಜೆ ಮಾಡುವ ಮೂಲಕ ಅದ್ದೂರಿಯಾಗಿ ಬರಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ