Breaking News

ಲಸಿಕಾ ಕೇಂದ್ರಕ್ಕೆ ಜಿಲ್ಲಾ ಸಮೀಕ್ಷಣಾಧಿಕಾರಿ ಬೇಟಿ, ಪರಿಶೀಲನೆ

Spread the love

ಬಾಗಲಕೋಟೆ: ಜಿಲ್ಲೆಯಲ್ಲಿ ಬುಧವಾರ ಹಮ್ಮಿಕೊಂಡ ಕೋವಿಡ್-19 ಲಸಿಕಾ ಮೇಳದ ಹಿನ್ನಲೆಯಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಅವರು ವಿವಿಧ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಜ್ಯ ಸರಕಾರದ ಸೂಚನೆ ಮೇರೆಗೆ ಲಸಿಕಾಕರಣ ಪ್ರಗತಿಯನ್ನು ವೃದ್ದಿಸುವ ನಿಟ್ಟಿನಲ್ಲಿ ಪ್ರತಿ ಬುಧವಾರ ಲಸಿಕಾ ಮೇಳ ಹಮ್ಮಿಕೊಳ್ಳಲಾಗುತ್ತಿದ್ದು, ಲಸಿಕಾಕರಣ ಪರಿಶೀಲನೆಗೆ ಬುಧವಾರ ಬಾದಾಮಿ ತಾಲೂಕಿನಲ್ಲಿ ಸ್ಥಾಪಿಸಲಾದ ವಿವಿಧ ಕೋವಿಡ್ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭೇಟಿ ಸಮಯದಲ್ಲಿ ಮುಖ್ಯ ವೈದ್ಯಾಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ದತ್ತಾಂಶ ವ್ಯವಸ್ಥಾಪಕ ಪ್ರವೀಣಕುಮಾರ, ಹಿರಿಯ ಆರೋಗ್ಯ ಸಹಾಕರಾದ ಡಿ.ಎಸ್.ಕೊಣ್ಣೂರ, ಬಡ್ಡಿ, ವ್ಯವಸ್ಥಾಪಕ ಹರಿಕಿರಣ ಇದ್ದರು.

ಬುಧವಾರ ನಡೆದ ಕೋವಿಡ್ ಲಸಿಕಾ ಮೇಳದಲ್ಲಿ ಸಂಜೆ 5.30ರ ಹೊತ್ತಿಗೆ ಜಿಲ್ಲೆಯಾದ್ಯಂತ ಒಟ್ಟು 33,192 ಜನರು ಲಸಿಕೆ ಪಡೆದುಕೊಂಡಿರುತ್ತಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 13,30,262 ಜನ ಲಸಿಕೆ ಪಡೆದುಕೊಂಡಿದ್ದಾರೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ