Breaking News
Home / ರಾಜಕೀಯ / 35 ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

35 ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

Spread the love

ಜನವಾಡ: ಅರಳು ಸ್ವಯಂ ಸೇವಾ ಸಂಸ್ಥೆಯು ಆಶಾ ಫಾರ್ ಎಜುಕೇಷನ್ ಸಂಸ್ಥೆ ನೆರವಿನಡಿ ಬೀದರ್‍ನ ನಾವದಗೇರಿ, ಕಮಠಾಣ, ಯದಲಾಪುರ ಹಾಗೂ ಕಾಪಲಾಪುರ ಗ್ರಾಮಗಳ 35 ಬಡ ಕುಟುಂಬಗಳಿಗೆ ಉಚಿತ ಆಹಾರಧಾನ್ಯ ಕಿಟ್ ವಿತರಿಸಿತು.

ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯ ಹಿಂದುಗಡೆಯ ಸಂಸ್ಥೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅರಳು ಸಂಸ್ಥೆ ನಿರ್ದೇಶಕ ಡಾ. ಕೆ.ಟಿ. ಮೆರಿಲ್ ಅವರು, ಕೋವಿಡ್ ಪ್ರಯುಕ್ತ ತಲಾ ಐದು ಕೆ.ಜಿ ಅಕ್ಕಿ, ಜೋಳ, 2 ಕೆ.ಜಿ. ರವೆ, 1 ಕೆ.ಜಿ. ಸಿಹಿ ಎಣ್ಣೆ, 1 ಕೆ.ಜಿ. ತೊಗರಿ ಬೇಳೆ, 1 ಕೆ.ಜಿ. ಚಣಗಿ ಬೇಳೆ ಒಳಗೊಂಡ ಕಿಟ್ ವಿತರಿಸಲಾಗಿದೆ ಎಂದು ತಿಳಿಸಿದರು.

ಆಶಾ ಫಾರ್ ಎಜುಕೇಷನ್ ಅಮೆರಿಕದಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸ್ಥಾಪಿಸಿದ ಸಂಸ್ಥೆಯಾಗಿದೆ. ಸಮಾಜ ಸೇವಾ ಚಟುವಟಿಕೆಗಳಲ್ಲಿ ನಿರತವಾಗಿದೆ. ಸಂಸ್ಥೆ ನೆರವಿನಡಿ ಈಗಾಗಲೇ 50 ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಿಸಲಾಗಿದೆ. ಬರುವ ದಿನಗಳಲ್ಲಿ ಇನ್ನೂ 150 ಬಡ ಕುಟುಂಬಗಳಿಗೆ ಕಿಟ್ ವಿತರಿಸಲು ಯೋಜಿಸಲಾಗಿದೆ ಎಂದು ಹೇಳಿದರು.

ಕೋವಿಡ್ ಎರಡನೇ ಅಲೆ ಜಿಲ್ಲೆಯಲ್ಲಿ ಬಹುತೇಕ ನಿಯಂತ್ರಣಕ್ಕೆ ಬಂದಿದೆ. ಆದರೂ, ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಚಾಚೂತಪ್ಪದೆ ಪಾಲಿಸಬೇಕು. ಸ್ವಯಂ ಪ್ರೇರಣೆಯಿಂದ ಲಸಿಕೆ ಪಡೆದು ಜಿಲ್ಲೆಯನ್ನು ಕೋವಿಡ್‍ಮುಕ್ತಗೊಳಿಸಲು ಆಡಳಿತದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಅರಳು ಸಂಸ್ಥೆ ಕಾರ್ಯಕ್ರಮ ನಿರ್ದೇಶಕಿ ಸುನಿತಾ, ಸ್ವಯಂ ಸೇವಕರಾದ ಸುರೇಕಲಾ ಕಮಠಾಣ, ಯೋಹಾನ್ ಬೀದರ್ ಇದ್ದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ