Breaking News

ಕಲ್ಯಾಣ ಕರ್ನಾಟಕ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ಆರೋಪ: ಸರ್ಕಾರದ ವಿರುದ್ಧ ಸಿಡಿದೆದ್ದ ಕಾಂಗ್ರೆಸ್

Spread the love

ಬೆಂಗಳೂರು: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕರು ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಯಮ 69ರ ಅಡಿಯ ಚರ್ಚೆಯ ವೇಳೆ ಮಾತನಾಡಿದ ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ, ಹೈದರಾಬಾದ್ ಕರ್ನಾಟಕ, ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಆದಾಗ ಜನರು ಖುಷಿಪಟ್ಟಿದ್ದರು. ಆದರೆ ಯವುದೇ ರೀತಿಯ ಅಭಿವೃದ್ಧಿ ಆಗಿಲ್ಲ.

ಹೈದರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಈವರೆಗೆ ರಚನೆ ಆಗಿಲ್ಲ. ಯಾವುದೇ ಅಧ್ಯಕ್ಷರ ನೇಮಕಾತಿಯೂ ಆಗಿಲ್ಲ, ಒಂದೇ ಒಂದು ಸಭೆ ಕೂಡ ನಡೆದಿಲ್ಲ ಎಂದು ಹೇಳಿದರು. ಮಂಜೂರಾತಿ ಆದ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ಸರ್ಕಾರ ಕೊಟ್ಟಿತ್ತು. ಆದ್ರೆ, ಕೋವಿಡ್ ನೆಪದಲ್ಲಿ ನೇರ ನೇಮಕಾತಿ ಹುದ್ದೆಗಳ ಭರ್ತಿ ತಡೆ ಹಿಡಿಯಲಾಗಿದೆ. 30


Spread the love

About Laxminews 24x7

Check Also

ಬೆಳಗಾವಿ ಡಿಸಿಸಿ ಬ್ಯಾಂಕ್ 4 ಕ್ಷೇತ್ರಗಳ ಫಲಿತಾಂಶ ಪ್ರಕಟ: 15 ದಿನಗಳಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

Spread the love ಬೆಳಗಾವಿ: ಕೋರ್ಟ್ ವ್ಯಾಜ್ಯದ ಹಿನ್ನೆಲೆಯಲ್ಲಿ ವಿಳಂಬವಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಬಿಡಿಸಿಸಿ)ನ ನಾಲ್ಕು ಕ್ಷೇತ್ರಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ