Breaking News

ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್‍ನಿಂದ ಸಂಪೂರ್ಣ ಬೆಂಬಲ

Spread the love

ಬೆಂಗಳೂರು: ಒಕ್ಕೂಟ ಸರ್ಕಾರವು ಜಾರಿಗೆ ತಂದಿರುವ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೆ.27ರ ಭಾರತ್ ಬಂದ್‍ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ಘೋಷಿಸುತ್ತದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ತಿಳಿಸಿದ್ದಾರೆ.

ಒಕ್ಕೂಟ ಸರ್ಕಾರವು ವಿವಾದಿತ ಕೃಷಿ ಕಾನೂನು ಜಾರಿಗೆ ತಂದು ಒಂದು ವರ್ಷವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ರೈತ ವಿರೋಧಿಕಾಯ್ದೆಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ರೈತ ಸಂಘಟನೆಗಳು ರಾಜಧಾನಿ ದಿಲ್ಲಿಯ ಗಡಿಯಲ್ಲಿ ಪ್ರತಿಭಟನಾ ನಿರತವಾಗಿವೆ. ಲಕ್ಷಾಂತರ ಸಂಖ್ಯೆಯ ರೈತಾಪಿ ವರ್ಗಗಳು ಸುಮಾರು ಒಂದು ವರ್ಷದಿಂದ ವಿರೋಧ ಪ್ರದರ್ಶನ ನಡೆಸುತ್ತಿದ್ದರೂ, ಒಕ್ಕೂಟ ಸರ್ಕಾರವು ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ ಮತ್ತು ಪ್ರತಿಭಟನೆಯನ್ನು ದಮನಿಸುವ ಪಿತೂರಿಗಳನ್ನು ನಡೆಸುತ್ತಿದೆ. ಆದರೂ ದೃತಿಗೆಡದ ರೈತರು ಎಲ್ಲಾ ಸಂಕಷ್ಟಗಳನ್ನು ಎದುರಿಸಿಕೊಂಡು ಪ್ರತಿಭಟನೆಯನ್ನು ಮುಂದುವರಿಸಿರುವುದು ಆಶಾದಾಯಕವಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ‌ ಇಲ್ಲ : ಆರ್ ವಿ ದೇಶಪಾಂಡೆ

Spread the loveಶಿರಸಿ (ಉತ್ತರ ಕನ್ನಡ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದ್ದು, ಮುಖ್ಯಮಂತ್ರಿ ಬದಲಾವಣೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ