Breaking News

ಅಸ್ಪೃಶ್ಯತೆ ನಿವಾರಣೆಗೆ ಪಣತೊಟ್ಟ ಕೊಪ್ಪಳ ಪೊಲೀಸರು; ಹಳ್ಳಿ ಹಳ್ಳಿಗೂ ತೆರಳಿ ಜನರಿಂದ ಪ್ರತಿಜ್ಞೆ

Spread the love

ಕೊಪ್ಪಳ: ದೇಶಕ್ಕೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ಇನ್ನೂ ಅಸ್ಪೃಶ್ಯತೆ ಜೀವಂತವಾಗಿ ಉಸಿರಾಡುತ್ತಿದೆ. ಇದಕ್ಕೆ ಉದಾಹರಣೆಯೇ ಇತ್ತೀಚೆಗೆ ಹುಟ್ಟುಹಬ್ಬದ ಸಂಭ್ರಮದಲ್ಲಿ ದೇವರ ದರ್ಶನಕ್ಕಾಗಿ ಹನುಮಂತ ದೇವರ ದೇವಸ್ಥಾನಕ್ಕೆ ಪ್ರವೇಶ ಮಾಡಿದ ದಲಿತ ಬಾಲಕನಿಗೆ ದಂಡ ವಿಧಿಸಿದ್ದಾರೆ. ಹೀಗಿರುವಾಗಲೇ ಅಸ್ಪೃಶ್ಯತೆ ನಿವಾರಣೆಗಾಗಿ ಕೊಪ್ಪಳ ಪೊಲೀಸರು ಪಣತೊಟ್ಟಿದ್ದಾರೆ.

ಹೌದು, ಇನ್ನೂ ಕೊಪ್ಪಳದಲ್ಲಿ ಜೀವಂತವಾಗಿರುವ ಅಸ್ಪೃಶ್ಯತೆ ನಿವಾರಣೆಗೆ ಪೊಲೀಸರು ಮುಂದಾಗಿದ್ದಾರೆ. ಹೀಗಾಗಿಯೇ ಜಿಲ್ಲೆಯ ಹಳ್ಳಿ ಹಳ್ಳಿಗೂ ತೆರಳಿ ಅಸ್ಪೃಶ್ಯತೆ ನಿವಾರಣೆಗೆ ಪ್ರತಿಜ್ಞೆ ಮಾಡಿಸುತ್ತಿದ್ದಾರೆ. ಎಸ್​​ಪಿ ಟಿ. ಶ್ರೀಧರ್​​ ನೇತೃತ್ವದ ಪೊಲೀಸರ ತಂಡ ಹೊಸ ಪ್ರಯತ್ನ ಮಾಡುತ್ತಿದೆ.

ಇದರ ಮೊದಲ ಪ್ರಯತ್ನವಾಗಿ ಕೊಪ್ಪಳ ಪೊಲೀಸರು ಜಿಲ್ಲೆಯ ಬೇವಿನಾಳ ಗ್ರಾಮದಲ್ಲಿ ಅಗ್ರಗಣ್ಯ ಜಾತಿ ಮತ್ತು ದಲಿತರ ಸಭೆ ನಡೆಸಿದರು. ಸಭೆ ನಂತರ ಯಾವುದೇ ಕಾರಣಕ್ಕೂ ನಾವು ಅಸ್ಪೃಶ್ಯತೆ ಆಚರಣೆ ಮಾಡುವುದಿಲ್ಲ. ಈ ಅಸ್ಪೃಶ್ಯತೆ ಎಂಬ ಅನಿಷ್ಟ ಪದ್ದತಿಯನ್ನು ತೊಲಗಿಸೋಣ. ಸಂವಿಧಾನದ ಆಶಯಗಳಿಗಾಗಿ ಕೆಲಸ ಮಾಡೋಣ ಎಂದು ಪ್ರತಿಜ್ಞೆ ಮಾಡಿಸಿದ್ದಾರೆ.


Spread the love

About Laxminews 24x7

Check Also

ಆರೋಗ್ಯ ಮತ್ತು ಫಿಟ್ನೆಸ್ ಕಡೆ ಗಮನ ಹರಿಸಿದರೆ ಜೀವನದಲ್ಲಿ ಸದಾಕಾಲ ಸಂತೋಷದಿಂದ ಇರಬಹುದು ಎಂದು ಮೈಸೂರಿನಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹೇಳಿದರು.

Spread the loveಮೈಸೂರು: ಜೀವನದಲ್ಲಿ ಸಂಪಾದನೆ ಮುಖ್ಯ. ಅದರೆ ಜೊತೆಯಲ್ಲಿ ನೆಮ್ಮದಿಯಾಗಿರಲು ಆರೋಗ್ಯವನ್ನೂ ಸಂಪಾದಿಸಬೇಕು ಎಂದು ಬಾಲಿವುಡ್ ನಟಿ ಶಿಲ್ಪ ಶೆಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ