Breaking News

ಬಿಜೆಪಿ ಸೇರಲು ಕಾಂಗ್ರೆಸ್ಸಿಗರು ತುದಿಗಾಲಿನಲ್ಲಿ ನಿಂತಿದ್ದಾರೆ : ಶಾಸಕ ರೇಣುಕಾಚಾರ್ಯ

Spread the love

ದಾವಣಗೆರೆ: ಕಾಂಗ್ರೆಸ್ ನ ಸಮಾನ ಮನಸ್ಕರರು ಬಿಜೆಪಿ ಸೇರಲು ತುದಿಗಾಲ ಮೇಲೆ ನಿಂತಿದ್ದಾರೆ. ಕಾದು ನೋಡಿ ಎಂದು ಶಾಸಕ ರೇಣುಕಾಚಾರ್ಯ ಹೇಳಿದರು.

ಅವರು ಶನಿವಾರ ಸಂಜೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್‌ನಿಂದ ಹಲವಾರು ಜನ‌ ಬಿಜೆಪಿಗೆ ಬರಲು ಸಾಲಿನಲ್ಲಿ‌ ನಿಂತಿದ್ದಾರೆ. ಬಿಜೆಪಿ ತತ್ವ‌ ಸಿದ್ಧಾಂತ ಒಪ್ಪಿಕೊಂಡು ಪಕ್ಷ ಸೇರಲು ಸಿದ್ದರಾಗಿದ್ದಾರೆ. ಇಷ್ಟರಲ್ಲೆ ಎಲ್ಲ ಬದಲಾಗಲಿದೆ. 2023 ಕ್ಕೆ ಕಾಂಗ್ರೆಸ್‌ ಧೂಳಿಪಟವಾಗುತ್ತೆ ಎಂದರು.

ಭಾರತ್ ಬಂದ್‌ ಬಗ್ಗೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ಭಾರತ್ ಬಂದ್ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿ, ಜನರು ಈ ಫೇಕ್ ರೈತರ ಹೋರಾಟವನ್ನು ಬೆಂಬಲಿಸುವುದಿಲ್ಲ. ಇದಕ್ಕೆ ನಕಲಿ ಕಾಂಗ್ರೆಸ್ ಬೆಂಬಲವಾಗಿ ನಿಂತಿದೆ. ಬಿಜೆಪಿ ಕೇಂದ್ರ, ರಾಜ್ಯದಲ್ಲಿ‌ ಉತ್ತಮ ಆಡಳಿತ ನೀಡುತ್ತಿದೆ. ರೈತರು ಸೇರಿ ಎಲ್ಲ ವರ್ಗಗಳ ಅಭಿವೃದ್ಧಿಗೆ ಕಾರ್ಯಕ್ರಮ ನೀಡಿದೆ. ನೊಂದವರಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದೆ ಎಂದರು.

ಬಿಜೆಪಿ ಹಾಗೂ ಮೋದಿ ವರ್ಚಸ್ಸು ಕಂಡು ಕಾಂಗ್ರೆಸ್ ಹೋರಾಟದ ಹುನ್ನಾರ ನಡೆಸಿದ್ದು, ಈ ಹೋರಾಟಕ್ಕೆ ಯಾವ ಜನರೂ ಬೆಂಬಲಿಸಲ್ಲ ಎಂದರು.


Spread the love

About Laxminews 24x7

Check Also

ತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು

Spread the loveತ್ರಿಕಾಲ ಪೂಜಿತೆ ದಾನಮ್ಮದೇವಿ ದರ್ಶನ ಪಡೆದ ಸಚಿವ ಎಂಬಿಪಿ; ಪ್ರವಚನ ಆಲಿಸಿ ಸ್ವಾಮೀಜಿ ಆಶಿರ್ವಾದ ಪಡೆದ ಸಚಿವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ