Breaking News

ನಾವು ರಾಜೀನಾಮೆ ನೀಡಿ ಬಿಜೆಪಿಗೆ ಬರದಿದ್ದರೆ ಸಚಿವರಾಗುತ್ತಿರಲಿಲ್ಲ : ಬಿ.ಸಿ ಪಾಟೀಲ್

Spread the love

ಶಿವಮೊಗ್ಗ: ನಾವು ರಾಜೀನಾಮೆ ನೀಡಿ ಬಿಜೆಪಿ ಬರದಿದ್ದರೆ ಸಚಿವರಾಗುತ್ತಿರಲಿಲ್ಲಎಂದು ಸಚಿವ ಬಿ.ಸಿ. ಪಾಟೀಲ್ ಅವರು ಹೇಳಿದರು.

ಈಸೂರು ಹುತಾತ್ಮರ ಸ್ಮಾರಕ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ‌ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಮ್ಮ ಜೊತೆ ಗಟ್ಟಿಯಾಗಿ ನಿಂತಿದ್ದರಿಂದಲೇ ನಾವು ಬಿಜೆಪಿಗೆ ಬಂದಿದ್ದು. ನಂಬಿದವರಿಗೆ ಒಳ್ಳೆಯದನ್ನು ಮಾಡಲು ತಮ್ಮ ಸ್ಥಾನ ಬಿಡಲೂ ಯಡಿಯೂರಪ್ಪ ಅಂಜುವುದಿಲ್ಲ‌. ಯಡಿಯೂರಪ್ಪ ಅವರು ಜಾತ್ಯಾತೀತ ನಾಯಕ. ನಾವು ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದ 17 ಜನರಲ್ಲಿ ಇಬ್ಬರು ಮಾತ್ರ ಲಿಂಗಾಯತ ಶಾಸಕರು. ಆದರೆ, ಯಡಿಯೂರಪ್ಪ ಅವರು 17 ಜನ ಶಾಸಕರನ್ನೂ ಕೈಬಿಡಲಿಲ್ಲ ಎಂದರು.

ಇನ್ನು ಸ್ಮಾರಕ ನಿರ್ಮಾಣದಿಂದಾಗಿ ಈಸೂರು ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗುತ್ತದೆ. ಸ್ವಾತಂತ್ರ್ಯ ಹೋರಾಟಗಾರರ ಬಿಸಿ ಉಸಿರು ಇನ್ನೂ ಈಸೂರು ಗ್ರಾಮದಲ್ಲಿ ಉಸಿರಾಡುತ್ತಿದೆ ಎಂದರು.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ