Breaking News

ಸಕಾಲಕ್ಕೆ ಬಾರದ ಆಂಬ್ಯುಲೆನ್ಸ್.. ಫುಟ್​ಪಾತ್​ನಲ್ಲಿಯೇ ಮಲಗಿದ ರೋಗಿ..!

Spread the love

ರಾಯಚೂರು: ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಾರದೆ ರೋಗಿಯೋರ್ವ ಆಸ್ಪತ್ರೆ ಆವರಣದಲ್ಲಿಯೇ ಮಲಗಿ ಪರದಾಡಿದ ಘಟನೆ ಜಿಲ್ಲೆಯ ರಿಮ್ಸ್ ಆಸ್ಪತ್ರೆ ಬಳಿ ನಡೆದಿದೆ.

ಯಾದಗಿರಿ ಜಿಲ್ಲೆಯಿಂದ ಆಸ್ಪತ್ರೆಗೆ ಬಂದಿದ್ದ ರೋಗಿಗೆ ಹೆಚ್ಚಿನ ಚಿಕಿತ್ಸೆಗೆ ಬೇರೆ ಆಸ್ಪತ್ರೆಗೆ ದಾಖಲಾಗುವಂತೆ ವೈದ್ಯರು ಸೂಚಿಸಿದ್ದರು ಎನ್ನಲಾಗಿದೆ. ಅರ್ಧ ಗಂಟೆಯಿಂದ ಆಂಬ್ಯುಲೆನ್ಸ್​ಗಾಗಿ ಕಾದರೂ ಬಾರದ ಆಂಬ್ಯುಲೆನ್ಸ್ ನಿಂದ ಕಂಗಾಲಾದ ರೋಗಿ ಆಸ್ಪತ್ರೆ ಫುಟ್​ಪಾತ್​ ಮೇಲೆಯೇ ಮಲಗಿದ್ದಾನೆ. ಫುಟ್​ಪಾತ್​ ಮೇಲೆ ಮಲಗಿದ ಸಾಕಷ್ಟು ಹೊತ್ತಿನ ಬಳಿಕ ಆಂಬ್ಯುಲೆನ್ಸ್ ಆಗಮಿಸಿದ್ದು ಬಳಿಕ ಆಂಬ್ಯುಲೆನ್ಸ್ ನಲ್ಲಿ ತೆರಳಿದ್ದಾನೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ