Breaking News

ಸಿಂದಗಿ ವಿಧಾನಸಭೆ ಬೈಎಲೆಕ್ಷನ್​ಗೆ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್​

Spread the love

ಬೆಂಗಳೂರು: ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ಘೋಷಣೆ ಆಗುತ್ತಿದ್ದಂತೆ, ಕಾಂಗ್ರೆಸ್​ ಅಭ್ಯರ್ಥಿಯನ್ನ ಘೋಷಣೆ ಮಾಡಿದೆ. ಅಶೋಕ್ ‌ಮನಗೂಳಿ‌ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಈಶ್ವರ್​ ಖಂಡ್ರೆ, ಹಾನಗಲ್ ಕ್ಷೇತ್ರದ ಅಭ್ಯರ್ಥಿ ಬಗ್ಗೆ ಪಕ್ಷದ ವರಿಷ್ಠರು ಘೋಷಣೆ ಮಾಡಲಿದ್ದಾರೆ. ಈ ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳನ್ನು ಕಾಂಗ್ರೆಸ್ ಗೆಲ್ಲಲಿದೆ. ಹಾನಗಲ್​​​ನಲ್ಲಿ ಮನೋಹರ್ ತಹಶಿಲ್ದಾರ್, ಶ್ರೀನಿವಾಸ್ ಮಾನೆ ಆಕಾಂಕ್ಷಿಗಳಾಗಿದ್ದಾರೆ. ಇವರಿಬ್ಬರಷ್ಟೇ ಅಲ್ಲ, ಇನ್ನು ಕೆಲವರೂ ಟಿಕೆಟ್ ಕೇಳಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷರು, ವಿಪಕ್ಷ ನಾಯಕರು ಹಾಗೂ ಹೈಕಮಾಂಡ್ ನಾಯಕರು ಅಭ್ಯರ್ಥಿ ಫೈನಲ್ ಮಾಡಲಿದ್ದಾರೆ. ಇಬ್ಬರನ್ನೂ ಕೂರಿಸಿ, ಮಾತನಾಡಿಸಿ ಯಾವುದೇ ಭಿನ್ನಮತ ಇಲ್ಲದಂತೆ ಟಿಕೆಟ್ ಫೈನಲ್ ಮಾಡ್ತೇವೆ. ಜೆಡಿಎಸ್ ಈ ಹಿಂದೆ ಬಿಜೆಪಿಗೆ ಸಹಾಯ ಮಾಡಿತ್ತು. ಬಸವಕಲ್ಯಾಣ, ಮಸ್ಕಿ ಉಪಚುನಾವಣೆ ವೇಳೆ ಬಿಜೆಪಿಗೆ ಸಹಾಯ ಮಾಡಿತ್ತು. ಈ ಬಾರಿ‌ ನಾವು ನಮ್ಮ ಗೆಲುವಿನ ಬಗ್ಗೆ ಗಮನದಲ್ಲಿಟ್ಟುಕೊಂಡು ತಂತ್ರ ರೂಪಿಸುತ್ತೇವೆ ಎಂದರು.


Spread the love

About Laxminews 24x7

Check Also

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರದ ವಿರುದ್ಧ ಬಿಜೆಪಿ ಧರ್ಮ ಯುದ್ಧ ನಡೆಸುವುದಾಗಿ ಘೋಷಿಸಿದೆ.

Spread the love ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ “ಧರ್ಮದ ಉಳಿವಿಗಾಗಿ ಧರ್ಮ ಯುದ್ಧ” ಹೋರಾಟವನ್ನು ಮಾಡಲಿದ್ದೇವೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ