Breaking News

ಕೋರ್ಟ್​ ಆವರಣದಲ್ಲೇ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪತಿ

Spread the love

ಬೆಳಗಾವಿ: ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.

ಬೈಲಹೊಂಗಲ ತಾಲೂಕಿನ ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ (35) ಪತ್ನಿ ಜಯಮಾಲಾ (33) ಮೇಲೆ ಹಲ್ಲೆ ಮಾಡಿದ್ದು, ಮಾರಕಾಸ್ತ್ರದಿಂದ ಪತ್ನಿಯ ತಲೆ ಹಾಗೂ ಕಾಲಿಗೆ ಕೊಚ್ಚಿದ ಕೊಲೆ ಮಾಡಲು ಯತ್ನಿಸಿದ್ದಾನೆ.

 

 

ಪತಿ-ಪತ್ನಿಯ ಕೌಟುಂಬಿಕ ಕಲಹದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಇಂದು ಪ್ರಕರಣದ ವಿಚಾರಣೆಗೆ ಹಾಜರಾಗ ಬೇಕಿದ್ದ ಹಿನ್ನೆಲೆಯಲ್ಲಿ ಪತ್ನಿ ಜಯಮಾಲಾ ಕೋರ್ಟ್​​ಗೆ ಆಗಮಿಸಿದ್ದರು. ಪತಿ ಜೊತೆಗೆ ಜಗಳ ಮಾಡಿಕೊಂಡಿದ್ದ ಪತ್ನಿ ಜಯಮಾಲಾ ಗಂಡನ ಮನೆ ತೊರೆದು ತವರು ಮನೆ ಹುಬ್ಬಳ್ಳಿ ತಾಲೂಕಿನ ವರೂರದಲ್ಲಿ ವಾಸವಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಬ್ಯಾಂಕ್ ನಲ್ಲಿರುವ ಹಣದ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿತ್ತು ಎನ್ನಲಾಗಿದ್ದು, ಸದ್ಯ ಗಂಭೀರವಾಗಿ ಗಾಯಗೊಂಡಿರುವ ಜಯಮಾಲಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದಾರೆ ಎನ್ನಲಾಗಿದೆ. ಬೈಲಹೊಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ