Breaking News

ಕಿಚ್ಚನ ಕೋಟಿಗೊಬ್ಬ-3ಗೆ ಪೈರಸಿ ಭಯ..!

Spread the love

ಬೆಂಗಳೂರು: ಬಿಡುಗಡೆಗೂ ಮುನ್ನವೇ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ಪೈರಸಿ ಕಾಟ ಶುರುವಾಗಿದೆ. ಸಿನಿಮಾವನ್ನು ಬಿಡುಗಡೆಗೂ ಮುನ್ನ ಪೈರಸಿ ಮಾಡೋದಾಗಿ ಕೋಟಿಗೊಬ್ಬ 3 ಸಿನಿಮಾ ನಿರ್ಮಾಪಕ ಸೂರಪ್ಪಬಾಬುಗೆ ಟೆಲಿಗ್ರಾಂನಲ್ಲಿ ಬೆದರಿಕೆಗಳು ಬಂದಿವೆಯಂತೆ. ಈ ಹಿನ್ನೆಲೆ ಸೂರಪ್ಪ ಬಾಬು ಗೃಹ ಸಚಿವ ಆರಗ ಜ್ಞಾನೇಂದ್ರಗೆ ಪತ್ರ ಬರೆದಿದ್ದಾರೆ.

ಕೋಟಿಗೊಬ್ಬ 3 ಸಿನಿಮಾ ಅಕ್ಟೋಬರ್ 1 ರಂದು ರಿಲೀಸ್ ಆಗಲಿದೆ. ಆದ್ರೆ ಅದಕ್ಕೂ ಮುನ್ನ ಇದೀಗ ಪೈರಸಿಯ ಬೆದರಿಕೆ ಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಸಿನಿಮಾ ತಂಡ ಸೈಬರ್ ಕ್ರೈಂ ಮೊರೆ ಹೋಗಿದೆ. ಜೊತೆಗೆ ಕಮಿಷನರ್​ಗೂ ಭೇಟಿ ನೀಡಿ ಸೂರಪ್ಪ ಬಾಬು ಮನವಿ ಮಾಡಿಕೊಂಡಿದ್ದಾರೆ. ಪೈರಸಿ ಮಾಡೋರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ