Breaking News
Home / Uncategorized / ಮಹಾರಾಷ್ಟ್ರದಲ್ಲಿ ಮತ್ತೆ ಮಹಾ ಮಳೆ 13 ಸಾವು; 560ಕ್ಕೂ ಹೆಚ್ಚು ಮಂದಿಯ ರಕ್ಷಣೆ

ಮಹಾರಾಷ್ಟ್ರದಲ್ಲಿ ಮತ್ತೆ ಮಹಾ ಮಳೆ 13 ಸಾವು; 560ಕ್ಕೂ ಹೆಚ್ಚು ಮಂದಿಯ ರಕ್ಷಣೆ

Spread the love

ಮುಂಬೈ: ಗುಲಾಬ್​ ಚಂಡಮಾರುತದ ಪ್ರಭಾವದಿಂದ ಮಹಾರಾಷ್ಟ್ರದ ಹಲವೆಡೆ ಸುರಿದ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಈವರೆಗೆ ಒಟ್ಟು 13 ಜನ ಸಾವನ್ನಪ್ಪಿದ್ದಾರೆ. ಮರಾಠವಾಡ, ಮಹಾರಾಷ್ಟ್ರದ ಉತ್ತರ ಭಾಗಗಳಲ್ಲಿ ಮಳೆಗೆ ಅಪಾರ ಹಾನಿ ಉಂಟಾಗಿದೆ. ಎನ್​ಡಿಆರ್​ಎಫ್ ಪಡೆ ಸಂಕಷ್ಟದಲ್ಲಿ ಸಿಲುಕಿದ್ದ 560 ಮಂದಿಯನ್ನ ರಕ್ಷಣೆ ಮಾಡಿದೆ. 200ಕ್ಕೂ ಹೆಚ್ಚು ರಾಸುಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ. ಕೆಲವು ಮನೆಗಳಿಗೂ ಹಾನಿಯಾಗಿದೆ.

ಭಾರೀ ಮಳೆ ಹಿನ್ನೆಲೆ ಸಭೆ ನಡೆಸಿದ ಸಿಎಂ ಉದ್ಧವ್​ ಠಾಕ್ರೆ ಹಾನಿ ಕುರಿತು ತ್ವರಿತವಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ನಿರ್ದೇಶಿಸಿದ್ದಾರೆ. ಇನ್ನು ಹವಾಮಾನ ಇಲಾಖೆ ಕೂಡ ಮುಂದಿನ 24 ಗಂಟೆಯಲ್ಲಿ ಭಾರೀ ಮೆಯಾಗುವ ಮುನ್ಸೂಚನೆಯನ್ನ ನೀಡಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ