Breaking News

ಕಿಡಿಗೇಡಿಗಳ ಕಲ್ಲು ತೂರಾಟದಲ್ಲಿ ಸಾರ್ವಜನಿಕರ ತುರ್ತು ಸೇವೆಯ 112 ವಾಹನ.

Spread the love

 

ಘಟಪ್ರಭಾ: ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಘಟಪ್ರಭಾದ ದಳವಾಯಿ ನಗರದಲ್ಲಿ ಜನರ ತುರ್ತು ಸೇವೆಗಾಗಿರುವ ಪೊಲೀಸ್ ಇಲಾಖೆಯ 112 ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ವಾಹನ ಜಖುಂಗೊಳಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪೊಲೀಸರು ಅಪಾಯದಿಂದ ಪರಾಗಿದ್ದು 7 ಜನರ ಮೇಲೆ ಪೊಲೀಸರೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

 

ಘಟನೆಯ ವಿವರ: ಗೋಕಾಕ ತಾಲೂಕಿನ ಶಿಂಗಳಾಪೂರ ಗ್ರಾಮದ ಯುವತಿಯೊರ್ವಳನ್ನ ಘಟಪ್ರಭಾ ದಳವಾಯಿ ನಗರದ ಯುವಕನೊರ್ವ ಪ್ರೀತಿಸಿ ಗೋಕಾಕ ಉಪನೊಂದಣಾಧಿಕಾರಿ ಕಛೇರಿಯಲ್ಲಿ ಸೋಮವಾರ ವಿವಾಹ ನೊಂದಣೆ ಮಾಡಿಕೊಂಡು ಮನೆಗೆ ಬಂದಿದ್ದು ಈ ಬಗ್ಗೆ ಸಿಟ್ಟಿಗೆದ್ದ ಯುವತಿಯ ತವರು ಮನೆಯವರು ರಾತ್ರಿ 12 ಗಂಟೆ ಸುಮಾರಿಗೆ ಹುಡುಗನ ಮನೆಯ ಕಡೆ ಬಂದು ಗಲಾಟೆ ಮಾಡಿದಾಗ ಮನೆಯವರು ಪೊಲೀಸರ ತುರ್ತು ಸೇವೆಯ 112 ಕ್ಕೆ ಪೋನ್ ಮಾಡಿ ಕರೆಯಿಸಿಕೊಂಡಾಗ ಅಲ್ಲಿ ಸೇರಿರುವ ಕಿಡಿಗೇಡಿಗಳು 112 ವಾಹನದ ಮೇಲೆ ಕಲ್ಲು ತೂರಿದ್ದು ವಾಹನದ ಗಾಜು ಸಂಪೂರ್ಣ ಒಡೆದಿದ್ದು ವಾಹನದಲ್ಲಿ ಇದ್ದ ಇಬ್ಬರು ಪೊಲೀಸರು ಅಪಾಯದಿಂದ ಪರಾಗಿದ್ದು ನಂತರ ಪೊಲೀಸ್ ಠಾಣೆಯಿಂದ ಹೆಚ್ಚಿನ ಸಿಬ್ಬಂದಿ ಬಂದ ನಂತರ ಆರೋಪಿಗಳು ಪರಾರಿಯಾಗಿದ್ದಾರೆ.

 

ಘಟಪ್ರಭಾ ಪೊಲೀಸ್ ಠಾಣೆಯ 112 ವಾಹನದ ಮೇಲೆ ಕಲ್ಲು ತೂರಾಟ ನಡೆಸಿರುವುದು ಇದು 2ನೇ ಬಾರಿಯಾಗಿದ್ದು ಕೆಲವು ತಿಂಗಳ ಹಿಂದೆ ದುರುದುಂಡಿ ಗ್ರಾಮದಲ್ಲಿಯೂ ಇದೇ ವಾಹನದ ಮೇಲೆ ಕಲ್ಲು ತೂರಾಟ ಮಾಡಲಾಗಿತ್ತು.

 

 


Spread the love

About Laxminews 24x7

Check Also

11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ” ಆರೋಗ್ಯಕರ ಜೀವನಕ್ಕೆ ಯೋಗಾಭ್ಯಾಸ ಸಹಕಾರಿ: ಸಂಸದ ಜಗದೀಶ್ ಶೆಟ್ಟರ

Spread the love“ಬೆಳಗಾವಿ, ಜೂ.21(ಕರ್ನಾಟಕ ವಾರ್ತೆ): ಯೋಗ ಅಭ್ಯಾಸ ಸಾವಿರಾರು ವರ್ಷಗಳಿಂದ ಪಾಲಿಸುತ್ತಿರುವ ಆರೋಗ್ಯ ಸುಧಾರಣಾ ಕ್ರಮವಾಗಿದೆ. ಯೋಗದಿಂದ ಶಾರೀರಿಕ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ