Breaking News

ವಿದ್ಯುತ್ ಬಿಲ್ ವಸೂಲಿಗೆ ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು

Spread the love

ತುಮಕೂರು: ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ ಗ್ರಾಮಸ್ಥರು ಕಲ್ಲು, ದೊಣ್ಣೆಗಳಿಂದ ಹೊಡೆದ ಘಟನೆ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಚಿಕ್ಕನಕೋಟೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ.

ವಿದ್ಯುತ್ ಬಿಲ್ ವಸೂಲಿಗಾಗಿ ಶಾಖಾಧಿಕಾರಿ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಕಲ್ಲು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗ್ರಾಮಸ್ಥರು ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಲೈನ್ ಮ್ಯಾನ್​ಗಳಾದ ಭೂತರಾಜು, ನರಸಿಂಹರಾಜು, ತಿಪ್ಪೇಸ್ವಾಮಿ ಎಂಬುವರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುಗಳೆಲ್ಲರನ್ನೂ ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ.


Spread the love

About Laxminews 24x7

Check Also

ಬಿಎಂಐಸಿ ಯೋಜನೆಯನ್ನು ಮರುಪರಿಶೀಲಿಸಲು ಸರ್ಕಾರಕ್ಕೆ ಸೂಚಿಸಿದ ಹೈಕೋರ್ಟ್

Spread the loveಬೆಂಗಳೂರು: ಕಳೆದ 25 ವರ್ಷಗಳಲ್ಲಿ ಕೇವಲ ಒಂದು ಕಿಲೋ ಮೀಟರ್‌ ಮಾತ್ರ ನಿರ್ಮಾಣಗೊಂಡಿರುವ ಬೆಂಗಳೂರು ಮೈಸೂರು ಮೂಲ ಸೌಕರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ