Breaking News

ವಿಜಯನಗರ: ಕಲುಷಿತ ನೀರು ಸೇವನೆ ಪ್ರಕರಣ, ಐದಕ್ಕೇರಿದ ಸಾವಿನ ಸಂಖ್ಯೆ

Spread the love

ವಿಜಯನಗರ: ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಇತ್ತೀಚಿಗೆ ಕಲುಷಿತ ನೀರು ಕುಡಿದು ಓರ್ವ ಸಾವನ್ನಪ್ಪಿದ ಬೆನ್ನಲ್ಲೆ ಮತ್ತೇ ಮೂರು ಜನ ಮೃತಪಟ್ಟಿದ್ದು ಸಾವಿನ ಸಂಖ್ಯೆ 5 ಕ್ಕೇರಿದೆ.

ಕಲುಷಿತ ನೀರು ಸೇವಿಸಿದ ಪರಿಣಾಮ ವಾಂತಿ ಬೇಧಿ ಚಿಕಿತ್ಸೆಗಾಗಿ ಬಳ್ಳಾರಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಹಾವನೂರು ಬಸಮ್ಮ, ಲಕ್ಷ್ಮಮ್ಮ, ಅಂಗೂರುಗಟ್ಟಿ ಗೋಣೆಪ್ಪ ಎಂಬಾತರು ಅಸುನೀಗಿದ್ದಾರೆ. ಜೊತೆಗೆ ಮೊನ್ನೆ ಬಂಧುಗಳ ಮನೆಗೆ ಭೇಟಿ ನೀಡಿದ ಮಹಾದೇವಪ್ಪ ಹೆಳ್ಳಪ್ಪ ಎಂಬುವವರು ಕೂಡ ಮೃತಪಟ್ಟಿದ್ದಾಗಿ ನ್ಯೂಸ್​ಫಸ್ಟ್​ಗೆ ಮಾಹಿತಿ ಲಭ್ಯವಾಗಿದೆ.

ಕಳೆದ 20 ದಿನಗಳ ಹಿಂದೆ ಕುಲುಷಿತ ನೀರು ಕುಡಿದು ಅನಾರೋಗ್ಯಕ್ಕೊಳಗಾದ 105 ಕ್ಕೂ ಹೆಚ್ಚು ಮಂದಿಯನ್ನು ಹಡಗಲಿ, ಹೊಸಪೇಟೆ ಸೇರಿದಂತೆ ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಅವಘಡಕ್ಕೆ ಗ್ರಾಮ ಪಂಚಾಯತಿ ನಿರ್ಲಕ್ಷ್ಯ ಕಾರಣ ಎನ್ನಲಾಗಿದೆ.


Spread the love

About Laxminews 24x7

Check Also

ಡಿಕೆಶಿ ಸಿಎಂ ಆಗುವ ಕನಸು ಮಾತ್ರ ಕಾಣಬೇಕು

Spread the loveಮಂಡ್ಯ : ಡಿಕೆಶಿ ಏನಿದ್ರು ಸಿಎಂ ಆಗುವ ಕನಸು ಕಾಣಬೇಕು ಅಷ್ಟೇ. ಡಿಕೆಶಿಗೆ ಕಾಂಗ್ರೆಸ್‌ನಲ್ಲಿ ಯಾರು ಬಿಟ್ಟು ಕೊಡ್ತಾರೆ? …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ