Breaking News

ಖಾನಾಪುರ ಗ್ರಾಮಸ್ಥರ ಪರ ಡಾ.ಸೋನಾಲಿ ಸರ್ನೋಬತ್ ಅಹವಾಲು ಸಲ್ಲಿಕೆ

Spread the love

ಬೆಳಗಾವಿ – ಖಾನಾಪುರ ತಾಲೂಕಿನ ವಿವಿಧ ಗ್ರಾಮಸ್ಥರ ಪರವಾಗಿ ಬಿಜೆಪಿ ಮಹಿಳಾ ಮೋರಾರ್ಚಾ ಉಪಾಧ್ಯಕ್ಷರೂ, ಖಾನಾಪುರ ತಾಲೂಕು ಉಸ್ತುವಾರಿಗಳೂ ಆಗಿರುವ ಡಾ. ಸೋನಾಲಿ ಸರ್ನೋಬತ್ ನೇತೃತ್ವದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕಕ್ಕೇರಿಯ ಬಿಷ್ಠಾದೇವಿ ಜಾತ್ರೆಗೆ ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಹಾಗೂ ಜಾತ್ರೆಗೆ ಸೂಕ್ತ ಬಂದೋಬಸ್ತ್ ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಮನವಿ ಸಲ್ಲಿಸಲಾಯಿತು.

ಜಾತ್ರೆಯನ್ನು ಕೋವಿಡ್ ನಿಯಮ ಪಾಲಿಸಿ ನಡೆಸಲು ಅನುಮತಿ ನೂಡುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಬೋರುಣಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುರಪುರ, ಕೇರವಾಡ, ಕಲ್ಮೇಶ್ವರ ನಗರ ರಸ್ತೆಗಳನ್ನು ದುರಸ್ತಿ ಮಾಡಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್ ಅವರಿಗೆ ಮನವಿ ಸಲ್ಲಿಸಲಾಯಿತು.

ಗಸ್ಟೊಳ್ಳಿ, ಚನಕೆಬೈಲ್ ಗ್ರಾಮಸ್ಥರಿಗೆ ಪಡಿತರ ಚೀಟಿಗಳನ್ನು ನೀಡುವಂತೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳಿಗೆ ಸಹ
ಮನವಿ ಸಲ್ಲಿಸಲಾಯಿತು.

ಎಲ್ಲ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ಸಿಕ್ಕಿದೆ ಎಂದು ಡಾ.ಸೋನಾಲಿ ಸರ್ನೋಬತ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಅಡುಗೆ ಅನಿಲ ಕೊರತೆ – ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಕೆಶಿ

Spread the loveಬೆಂಗಳೂರು: ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ