Breaking News

ರಸ್ತೆಯಿಂದ ಇಳಿದು ಗದ್ದೆಗೆ ನುಗ್ಗಿದ ಸರ್ಕಾರಿ ಬಸ್; ವಿದ್ಯಾರ್ಥಿಗಳೇ ತುಂಬಿದ್ದರು!

Spread the love

ಬಳ್ಳಾರಿ: ಶಾಲಾ ಕಾಲೇಜಿನ ಮಕ್ಕಳೇ ಹೆಚ್ಚಾಗಿದ್ದ ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಭತ್ತದ ಗದ್ದೆಗೆ ನುಗ್ಗಿದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಓರ್ವಾಯಿ ಗ್ರಾಮದ ಬಳಿ ನಡೆದಿದೆ. ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣ ಹಾನಿಯಾಗಿಲ್ಲ‌.

ಓರ್ವಾಯಿ ಗ್ರಾಮದಿಂದ ಬಳ್ಳಾರಿಗೆ ತೆರಳುತ್ತಿದ್ದ ಬಸ್​ನಲ್ಲಿ ಶಾಲಾ ಕಾಲೇಜಿನ ವಿದ್ಯಾರ್ಥಿಗಳೇ ಹೆಚ್ಚಾಗಿ ಪ್ರಯಾಣಿಸುತ್ತಿದ್ದರು. ರಸ್ತೆ ಕಿರಿದಾಗಿರುವುದರಿಂದ ಚಾಲಕನಿಗೆ ನಿಯಂತ್ರಿಸುವಲ್ಲಿ ಸಮಸ್ಯೆಯಾಗಿ, ಬಸ್​ ರಸ್ತೆ ಪಕ್ಕದಲ್ಲಿದ್ದ ಗದ್ದೆಗೆ ನುಗ್ಗಿತು. ಗದ್ದೆಯು ತಗ್ಗಿನಲ್ಲಿದ್ದರೂ ಬಸ್​ ಕೊಂಚವೇ ವಾಲಿ ನಿಂತಿದ್ದರಿಂದ ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ. ಬಸ್ಸಿನ ಕಂಡೀಷನ್​ ಸರಿಯಾಗಿಲ್ಲದ್ದೂ ಈ ರೀತಿಯಾಗಲು ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ