Breaking News

ಸಮಾಜಸೇವೆ, ರಾಷ್ಟ್ರನಿರ್ಮಾಣವನ್ನು ಸಿದ್ದರಾಮಯ್ಯರಿಂದ ಕಲಿಯುವ ಅಗತ್ಯವಿಲ್ಲ: ಕ್ಯಾ.ಕಾರ್ಣಿಕ್

Spread the love

ಬೆಂಗಳೂರು: ನಾನು ಶಾಖೆಯಿಂದ ಹೊರ ಬಂದು ಸೈನ್ಯ ಸೇರಿದೆ. ಅದೇ ರೀತಿ ಶಾಖೆಯಿಂದ ಬಂದು ಹಲವರು ಬೇರೆ ಬೇರೆ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಸಮಾಜ ಸೇವೆ, ರಾಷ್ಟ್ರ ನಿರ್ಮಾಣವನ್ನು ಸಿದ್ದರಾಮಯ್ಯರಿಂದ ಕಲಿಯುವ ಅಗತ್ಯ ಇಲ್ಲ ಎಂದು ಮಾಜಿ ಪರಿಷತ್ ಸದಸ್ಯ, ಬಿಜೆಪಿ ನಾಯಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ ಎಸ್‌ಎಸ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದರು.

ನಾನು ಸೈನ್ಯದಲ್ಲಿ ಕೆಲಸ ಮಾಡಿದೆನೆಂದರೆ ಅದಕ್ಕೆ ಕಾರಣ ಆರ್ ಎಸ್‌ಎಸ್. ಇಬ್ಬರು ಮಾಜಿ ಸಿಎಂಗಳು ಮುಂದಿನ ಚುನಾವಣೆಯಲ್ಲಿ ಒಂದು ಸಮುದಾಯದ ಮತಕ್ಕಾಗಿ ಆರ್ ಎಸ್‌ಎಸ್ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಮಾಡುವ ಕೆಲಸ ಬಿಟ್ಟು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ