Breaking News

ವಿದ್ಯಾರ್ಥಿನಿಯರಿಗೆ ಮೊಬೈಲ್ ಕೊಡಿಸಿದ ಹೊನ್ನಾಳಿ ರೇಣುಕಾಚಾರ್ಯ

Spread the love

ದಾವಣಗೆರೆ: ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರು ತಮ್ಮ ಕ್ಷೇತ್ರದಲ್ಲಿ ಕೊರೊನಾ ವೈರಸ್​ ನಿಂದ ಸಂಕಷ್ಟಕ್ಕೀಡಾದವರಿಗೆ ತನ್ನ ಕೈಲಾದ ಸಹಾಯ ಮಾಡುತ್ತಾ ಮಾನವೀಯತೆ ಮೆರೆಯುತ್ತಿದ್ದಾರೆ. ಇದೀಗ ಮತ್ತ್ತೊಮ್ಮೆ ಬಡ ವಿದ್ಯಾರ್ಥಿನಿಯರಿಗೆ ಮೊಬೈಲ್​​ ನೀಡುವ ಮೂಲಕ ಮತ್ತೆ ಸುದ್ದಿಗೆ ಬಂದಿದ್ದಾರೆ. ಜನೋಪಕಾರಿ ಕೆಲಸಗಳಿಗೆ ತಾನು ಎಂದೆಂದಿಗೂ ಸಿದ್ಧ ಎನ್ನುವ ರೇಣುಕಾಚಾರ್ಯರು ಇತರ ರಾಜಕಾರಣಿಗಳಿಗೆ ಮಾದರಿಯಾಗಿದ್ದಾರೆ.

ಟಿ. ಗೋಪಗೊಂಡನಹಳ್ಳಿಯ ಬಿಂದು ಮತ್ತು ಸುಂಕದಕಟ್ಟೆ ಗ್ರಾಮದ ನರ್ಮದಾ ಎಂಬಿಬ್ಬರು ವಿದ್ಯಾರ್ಥಿಗಳು ಮೊಬೈಲ್​​ ಇಲ್ಲದೆ ಪರದಾಡುತ್ತಿದ್ದರು. ಇದರಿಂದ ಆನ್​​ ಲೈನ್​​ ಕ್ಲಾಸ್​​ ಗೆ ತೊಂದರೆಯಾಗುತ್ತಿತ್ತು. ಹೀಗಾಗಿ ರೇಣುಕಾಚಾರ್ಯ ಅವರು ಈ ಹಿಂದೆ ಆ ವಿಧ್ಯಾರ್ಥಿನಿಯರಿಗೆ ಭರವಸೆ ನೀಡಿದ್ದರು. ಅದರಂತೆ ಇದೀಗ ಅವರಿಗೆ ಸ್ಮಾರ್ಟ್​ ಫೋನ್​​ ಕೊಡಿಸಿ ನೆರವಾಗಿದ್ದಾರೆ.

ಇನ್ನು, ವಿದ್ಯಾರ್ಥಿನಿಯರು ತಮ್ಮ ಕ್ಷೇತ್ರದ ಶಾಸಕರ ಬಗ್ಗೆ ಹೆಮ್ಮೆ ಪಟ್ಟುಕೊಂಡು ಶಾಸಕ ರೇಣುಕಾಚಾರ್ಯ ಅವರಿಗೆ ಧನ್ಯವಾದ ಹೇಳಿದ್ದಾರೆ.


Spread the love

About Laxminews 24x7

Check Also

ಬಜೆಟ್ ನಲ್ಲಿ ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?

Spread the loveಶಕ್ತಿ ಯೋಜನೆಗೆ 5,300 ಕೋಟಿ ರೂ. ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ