Breaking News
Home / ರಾಜಕೀಯ / ಪೊಲೀಸ್​​ ಅಧಿಕಾರಿಗಳ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ ಮಹಿಳೆ; ಯಾಕೆ?

ಪೊಲೀಸ್​​ ಅಧಿಕಾರಿಗಳ ಮುಂದೆಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ರೈತ ಮಹಿಳೆ; ಯಾಕೆ?

Spread the love

ಹಾವೇರಿ: ಪೊಲೀಸ್​​​ ಅಧಿಕಾರಿಗಳ ಮುಂದೆಯೇ ವಿಷ ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಸಿಎಂ ಬಸವರಾಜ್​​ ಬೊಮ್ಮಾಯಿ ಸ್ವಕ್ಷೇತ್ರ ಶಿಗ್ಗಾವಿ ತಾಲೂಕು ಗಡಿ ಭಾಗದ ತರ್ಲಘಟ್ಟ ಗ್ರಾಮದಲ್ಲಿ ರೈತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ರೈತರು ಭೂಮಿಯಲ್ಲಿ ಸಾಗುವಳಿ ಮಾಡಲು ಮುಂದಾದ ವಿಷಯ ತಿಳಿದು ದುಂಡಸಿ ಅರಣ್ಯ ಇಲಾಖೆಯ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದರು. ತಡಸ ಠಾಣೆಯ ಪೊಲೀಸ್​​ ಸಬ್​​ ಇನ್ಸ್​ಪೆಕ್ಟರ್​​​ ಕೂಡ ಸ್ಥಳಕ್ಕೆ ಹೋಗಿ ಮನವಿ ಮಾಡಿದರು.

ಇದು ಅರಣ್ಯ ಇಲಾಖೆಯ ಸ್ಥಳ. ಯಾರು ಅತಿಕ್ರಮಣ ಮಾಡಲು ಅವಕಾಶವಿಲ್ಲ. ಈ ಸ್ಥಳವನ್ನು ಅರಣ್ಯ ಇಲಾಖೆಯ ಕಾಯ್ದಿಟ್ಟ ಸ್ಥಳ ಎಂದು ಕಾಯ್ದಿರಿಸಲಾಗಿದೆ. ಹೀಗಾಗಿ ಕೃಷಿ ಮಾಡುವಂತಿಲ್ಲ ಎಂದು ಇಬ್ಬರು ರೈತರಿಗೆ ಹೇಳಿದ್ದಾರೆ ಎನ್ನಲಾಗಿದೆ.

ಇನ್ನು, ಕೂಡಲೇ ಸ್ಥಳದಲ್ಲಿದ್ದ ರೈತರು ಇದನ್ನು ವಿಡಿಯೋ ಮಾಡಲು ಮುಂದಾಗಿದ್ದಾರೆ. ಈ ವೇಳೆ ಅರಣ್ಯ ಇಲಾಖೆ ಅಧಿಕಾರಿ ವಿಡಿಯೋ ಮಾಡಬೇಡಿ, ನಾವೇ ಮಾಡುತ್ತೇವೆ ಎಂದಿದ್ದಾರೆ. ಆಗ ಮತ್ತೆ ರೈತ ಮಹಿಳೆ ವಿಡಿಯೋ ಮಾಡಲು ಮುಂದಾಗಿದ್ದು, ಅಧಿಕಾರಿ ಮೊಬೈಲ್​​​​ ಕಸಿದುಕೊಂಡಿದ್ದಾರೆ. ಇದರಿಂದ ಬೇಸತ್ತ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಮಹಿಳೆ ಅಸ್ವಸ್ಥರಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಸಿದ್ದರಾಮಯ್ಯನವರೇ ಅಧಿಕಾರದಿಂದ ಇಳೀರಿ, 24 ಗಂಟೆಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳುತ್ತೇವೆ. : ಆರ್. ಅಶೋಕ್ ಸವಾಲು

Spread the loveಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಸಿಎಂ ಸಿದ್ದರಾಮಯ್ಯ ಹಾಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ