Breaking News

ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

Spread the love

ಬಾಗಲಕೋಟೆ: ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಿಎಸ್ಎಪ್ ಯೋಧ ಮೃತಪಟ್ಟಿದ್ದಾರೆ. ಹುನಗುಂದ ತಾಲೂಕಿನ ಕೂಡಲಸಂಗಮದ ಮಹಾಂತೇಶ್ ಚೌಧರಿ ಮೃತ ಯೋಧ. ಮಹಾಂತೇಶ್ ಚೌಧರಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇಂದು (ಅ.13) ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿದೆ.

 

ಸದ್ಯ ಯೋಧ ಮಹಾಂತೇಶ್ ಚೌಧರಿ ರಾಜಸ್ಥಾನದ ಚಾರ್ಲಿ ಬಟಾಲಿಯನ್ 161ರಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ ತಾಯಿ, ತಮ್ಮ, ಪತ್ನಿ, ಇಬ್ಬರು ಪುತ್ರರು, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ಇಂದು ಯೋಧನ ಪಾರ್ಥಿವ ಶರೀರ ಹುಟ್ಟೂರಿಗೆ ಆಗಮಿಸಿದೆ. ಗ್ರಾಮದಲ್ಲಿ ಯೋಧನ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಲಾಗುತ್ತಿದೆ. ಮಧ್ಯಾಹ್ನ ಕೂಡಲಸಂಗಮದ ಯೋಧನ ಹೊಲದಲ್ಲಿ ಸರಕಾರಿ ಹಾಗೂ ಸೇನಾ ಗೌರವದೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ.

 


Spread the love

About Laxminews 24x7

Check Also

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ₹5 ಕೋಟಿ ಅನುದಾನ, ಹೈಕೋರ್ಟ್ ಸ್ಥಳಾಂತರ ಬಗ್ಗೆ ಪರಿಶೀಲನೆ: ಡಿಸಿಎಂ‌ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್, ಕರ್ನಾಟಕ ಹಾಗೂ ದೇಶದ ಹೆಗ್ಗುರುತುಗಳು. ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬಿಡಿಎಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ