Breaking News

ಸರ್ಕಾರಿ ಕಚೇರಿಗಳಲ್ಲಿ ಇಂದೇ ನೆರವೇರಿದ ಆಯುಧ ಪೂಜೆ

Spread the love

ಬೆಂಗಳೂರು, ಅ.13- ಆಡಳಿತದ ಶಕ್ತಿ ಕೇಂದ್ರವಾಗಿರುವ ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡ ಸೇರಿದಂತೆ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಇಂದೇ ಆಯುಧ ಪೂಜೆ ಮಾಡಲಾಯಿತು.ನಾಳೆ ಆಯುಧ ಪೂಜೆ ಅಂಗವಾಗಿ ಸರ್ಕಾರಿ ರಜೆ ಇರುವುದರಿಂದ ಸರ್ಕಾರಿ ಕಚೇರಿಗಳಲ್ಲಿ ಇಂದೇ ಪೂಜೆ ನೆರವೇರಿಸಲಾಯಿತು.

ಶುಕ್ರವಾರ ವಿಜಯದಶಮಿ ರಜೆ ಇದೆ. ಎರಡು ದಿನ ರಜೆ ಇರುವ ಹಿನ್ನೆಲೆಯಲ್ಲಿ ಕಚೇರಿಗಳನ್ನು ಸ್ವಚ್ಛಗೊಳಿಸಿ, ಹೂವು, ರಂಗೋಲಿ ಹಾಗೂ ತಳಿರು-ತೋರಣಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.ಸಚಿವರ, ಅಧಿಕಾರಿಗಳ ಕಚೇರಿಗಳು ಹಾಗೂ ವಿವಿಧ ರಾಜಕೀಯ ಪಕ್ಷದ ಕಚೇರಿಗಳಲ್ಲಿ ಪೂಜೆ ನೆರವೇರಿಸಿ ಪರಸ್ಪರ ಸಹಿ ವಿನಿಮಯ ಮಾಡಿಕೊಳ್ಳಲಾಯಿತು.

ಕೋವಿಡ್ ಹಿನ್ನೆಲೆಯಲ್ಲಿ ಬಹುತೇಕ ಕಚೇರಿಗಳಲ್ಲಿ ಸರಳ ಆಯುಧ ಪೂಜೆ ಮಾಡಲಾಗಿತ್ತು. ಅದೇ ರೀತಿ ಹಲವು ಸಂಘ- ಸಂಸ್ಥೆ ಹಾಗೂ ಕಂಪನಿಗಳಲ್ಲೂ ಇಂದೇ ಆಯುಧ ಪೂಜೆ ಮಾಡಲಾಯಿತು.


Spread the love

About Laxminews 24x7

Check Also

88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ

Spread the love88ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ