Home / Uncategorized / ಬೊಮ್ಮಾಯಿ ತಾಲಿಬಾನ್ ನಾಯಕರಂತೆ ಮಾತಾಡಿದ್ದಾರೆ : ರಾಜ್ಯ ಕಾಂಗ್ರೆಸ್

ಬೊಮ್ಮಾಯಿ ತಾಲಿಬಾನ್ ನಾಯಕರಂತೆ ಮಾತಾಡಿದ್ದಾರೆ : ರಾಜ್ಯ ಕಾಂಗ್ರೆಸ್

Spread the love

ಬೆಂಗಳೂರು : ನೈತಿಕ ಪೊಲೀಸ್‍ಗಿರಿಯನ್ನು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ನೈತಿಕ ಪೊಲೀಸ್‍ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆಗಳ ದಾಳಿಯನ್ನು ಸಮರ್ಥಿಸಿಕೊಂಡಿದ್ದಾರೆ. “ನೈತಿಕತೆಗೆ ಧಕ್ಕೆಯಾದಾಗ ಆಕ್ಷನ್, ರಿಯಾಕ್ಷನ್ ಆಗುತ್ತದೆ,” ಅಂತಾ ಬಸವರಾಜ ಬೊಮ್ಮಾಯಿ ಹೇಳಿದ್ದರು.

ಇದಕ್ಕೆ ಆಕ್ರೋಶ ಹೊರಹಾಕಿ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ರಾಜ್ಯದಲ್ಲಿ ‘ಅನೈತಿಕ ಪೊಲೀಸ್‍ಗಿರಿ’ ಹೆಸರಲ್ಲಿ ನಡೆಯುತ್ತಿರುವ ಭಯೋತ್ಪಾದಕ ಕೃತ್ಯಗಳಿಗೆ ಬಸವರಾಜ ಬೊಮ್ಮಾಯಿ ಅವರು ಕುಮ್ಮಕ್ಕಿನ ಹೇಳಿಕೆಯಿಂದ ಸಮಾಜಘಾತುಕ ಶಕ್ತಿಗಳಿಗೆ ಬಲ ಬಂದಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಯುವ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸಗಳು ಈ ಸರ್ಕಾರದಿಂದ ಸಾಧ್ಯವಿಲ್ಲ ಎಂದು ನಿಶ್ಚಿತವಾಯ್ತು.

ಅನೈತಿಕ ಪೊಲೀಸ್‍ಗಿರಿಯನ್ನು ಸಮರ್ಥಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾಲಿಬಾನ್ ಸಂಘಟನೆಯ ನಾಯಕರಂತೆ ಮಾತಾಡಿದ್ದಾರೆ. ಬಿಜೆಪಿಯ ಆಡಳಿತಕ್ಕೆ ಸಾಮಾಜಿಕ ಭಾವನೆಗಳೇ ಆಧಾರ ಎಂದಾದರೆ ದೇವದಾಸಿ ಪದ್ಧತಿ, ಅಸ್ಪೃಶ್ಯತೆಯ ಆಚರಣೆ, ಬೆತ್ತಲೆ ಸೇವೆಯಂತಹ ಸಾಮಾಜಿಕ ಆಚರಣೆಗಳ ಹಿಂದಿದ್ದ ‘ಭಾವನೆ’ಗಳನ್ನು ಪುರಸ್ಕರಿಸಲಾಗುತ್ತದೆಯೇ ಎಂದು ಪ್ರಶ್ನಿಸಿದೆ.


Spread the love

About Laxminews 24x7

Check Also

ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ

Spread the love ರಬಕವಿ-ಬನಹಟ್ಟಿ: ಕುಸ್ತಿ ಗ್ರಾಮೀಣ ಭಾಗದ ಬಹುದೊಡ್ಡ ಕ್ರೀಡೆ. ಗ್ರಾಮೀಣ ಭಾಗದ ಜನರು ಕುಸ್ತಿಗೆ ಬಹಳಷ್ಟು ಮಹತ್ವ ನೀಡುತ್ತಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ