Breaking News

ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಲು ಅನುಮತಿ ಕೊಡೋದಿಲ್ಲ: ಜಿಲ್ಲಾಧಿಕಾರಿ ಹಿರೇಮಠ

Spread the love

ಬೆಳಗಾವಿ-ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ ಮಾಡಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ,ಬಹಿರಂಗವಾಗಿ ಹೇಳಿದ ಮೊದಲ ಜಿಲ್ಲಾಧಿಕಾರಿ ಹಿರೇಮಠ ಇದರಲ್ಲಿ ಎರಡು ಮಾತಿಲ್ಲ.

ರಾಜ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಬೆಳಗಾವಿಯ ಎಲ್ಲ ಕನ್ನಡ ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ‌.ಜಿ ಹಿರೇಮಠ ಅವರು ಈಬಾರಿ ರಾಜ್ಯೋತ್ಸವದ ದಿನ ಎಂಈಎಸ್ ಗೆ ಕಪ್ಪು ದಿನ ಆಚರಿಸಲು ಅನುಮತಿ ಕೊಡೋದಿಲ್ಲ ಎಂದು ನೇರವಾಗಿ ಹೇಳುವ ಮೂಲಕ ಗಡಿನಾಡಿನ ಹೋರಾಟದಲ್ಲಿ ಹೊಸ ದಾಖಲೆ ಮಾಡಿದ್ದಾರೆ.

ಬೆಳಗಾವಿಯಲ್ಲಿ ಕಳೆದ ಐದು ದಶಕಗಳಿಂದ ನಾಡವಿರೋಧಿ ಎಂಈಎಸ್ ನಾಯಕರು ರಾಜ್ಯೋತ್ಸವದ ದಿನ ಕಪ್ಪು ದಿನ ಆಚರಿಸುತ್ತಲೇ ಬಂದಿದ್ದಾರೆ.ಇದಕ್ಕೆ ಎಲ್ಲ ಸರ್ಕಾರಗಳು,ಈ ಕಾಲಾವಧಿಯಲ್ಲಿ ಇದ್ದ ಎಲ್ಲ ಜಿಲ್ಲಾಧಿಕಾರಿಗಳು ಕಪ್ಪು ದಿನಕ್ಕೆ ಅನುಮತಿ ಕೊಡುತ್ತಲೇ ಬಂದಿದ್ದು ಜಿಲ್ಲಾಧಿಕಾರಿ ಎಂಜಿ ಹಿರೇಮಠ ಅವರು ಇದಕ್ಕೆ ಬ್ರೇಕ್ ಹಾಕುವ ಮೂಲಕ ಸಮಸ್ತ ಕನ್ನಡಿಗರ ಮೆಚ್ವುಗೆಗೆ ಪಾತ್ರರಾಗಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ