Breaking News

ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!

Spread the love

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಲಲಿತಾ ಕತ್ತಿ(37) ಮತ್ತು ಅನುಪಮಾ ದೊಡ್ಡಮನಿ(20) ಜಲಸಮಾಧಿಯಾದವರು. ಕೆರೆಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ಆರು ಜನ‌‌ರನ್ನು ಸ್ಥಳೀಯರು ಮತ್ತು ಮೀನುಗಾರರಿಂದ ಐವರ ರಕ್ಷಣೆಯಾಗಿದೆ. ಒಂದೇ ಕುಟುಂಬದ ವ್ಯಕ್ತಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಗುಳೇದಗುಡ್ಡ ಪಟ್ಟಣದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಲಲಿತಾ ಕತ್ತಿ ಮತ್ತು ಅನುಪಮಾ ದೊಡ್ಡಮನಿ ಅವರನ್ನು ರಕ್ಷಿಸಲು ಆರು ಜನ‌‌. ಕೆರೆಗೆ ಧುಮಿಕಿದ್ದರು. ಕೆರೆಯಲ್ಲಿ ಅವರೂ ಪರಡತೊಡಗಿದಾಗ ಐವರನ್ನು ರಕ್ಷಿಸಲಾಗಿದೆ. ಸ್ಥಳೀಯರು ಹಾಗೂ ಮೀನುಗಾರಿಂದ ಈ ಐವರ ರಕ್ಷಣೆಯಾಗಿದೆ. ಎಲ್ಲರೂ ಗುಳೇದಗುಡ್ಡ ಪಟ್ಟಣದ ನಿವಾಸಿಗಳು.‌‌ ಸ್ಥಳೀಯರು ಮತ್ತು ಮೀನುಗಾರರು ಸಯಪ್ರಜ್ಞೆಯಿಂದ ನೀರಿಗೆ ಬಿದ್ದವರ ಬಾಯಿಂದ ಬಾಯಿಗೆ ಬಾಯಿಂದ ಉಸಿರು ನೀಡಿ ಬದುಕಿಸಲು ಹರಸಾಹಸ ಪಟ್ಟಿದ್ದಾರೆ. ಅದರಿಂದ ಇಬ್ಬರು ಮಹಿಳೆಯರು ಬದುಕುಳಿದಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ