Breaking News

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ನಿರ್ಧಾರ!

Spread the love

ಬೆಂಗಳೂರು: ಪೆಟ್ರೋಲ್ (Petrol), ಡೀಸೆಲ್ (Diesel) ಬೆಲೆ ಏರಿಕೆ ಖಂಡಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಲಾರಿ ಮಾಲೀಕರ ಸಂಘ (Lorry Owners Association) ನಿರ್ಧರಿಸಿದೆ. ರಾಜ್ಯಾದ್ಯಂತ ಲಾರಿ ಮುಷ್ಕರದ ಬಗ್ಗೆ ಲಾರಿ ಮಾಲೀಕರ ಸಂಘ ಅಕ್ಟೋಬರ್ 23ರಂದು ತೀರ್ಮಾನ ಕೈಗೊಳ್ಳಲಿದೆ. ಅಕ್ಟೋಬರ್ 23ರ ರೊಳಗೆ ರಾಜ್ಯ ಸರ್ಕಾರ ಡೀಸೆಲ್ ಮೇಲೆ ವಿಧಿಸಿರುವ ವ್ಯಾಟ್ ಕಡಿಮೆ ಮಾಡಿದರೆ ಮಾತ್ರ ಲಾರಿಗಳು ರಸ್ತೆಗೆ ಇಳಿಯುತ್ತವೆ. ಇಲ್ಲವಾದಲ್ಲಿ ಗೂಡ್ಸ್ ವೆಹಿಕಲ್ಗಳ ಓಡಾಟ ರಾಜ್ಯಾದ್ಯಂತ ನಿಲ್ಲುತ್ತವೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಲು ಸರ್ಕಾರಕ್ಕೆ ಮುಂದಿನ ವಾರದ ವರೆಗೆ ಲಾರಿ ಮಾಲೀಕರ ಸಂಘ ಡೆಡ್ ಲೈನ್ ಕೊಟ್ಟಿದೆ. ಈಗಾಗಲೇ ಒಂದು ವರ್ಷದಲ್ಲಿ 26 ರೂ. ಹೆಚ್ಚಳವಾಗಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಲಾರಿ ಮುಷ್ಕರ ನಡೆಸಲು ಚಿಂತನೆ ನಡೆಸಿದೆ. ಲಾರಿ ಮುಷ್ಕರವಾದರೆ ಜನಜೀವನ ಅಸ್ತವ್ಯಸ್ತವಾಗುತ್ತದೆ. ಅಗತ್ಯ ವಸ್ತುಗಳ ಬೆಲೆ ಈಗಾಗಲೇ ಹೆಚ್ಚಾಗಿದೆ. ಗೂಡ್ಸ್ ಲಾರಿಗಳ ಓಡಾಟ ಸ್ಥಗಿತವಾದರೆ ಎಲ್ಲ ರೀತಿಯ ವಸ್ತುಗಳ ಸರಬರಾಜು ಬಂದ್ ಆಗಲಿದೆ.

ಹಾಲು, ಹಣ್ಣು, ತರಕಾರಿ, ಹೂ, ದಿನಸಿ ಪದಾರ್ಥಗಳು ಸೇರಿದಂತೆ ಎಲ್ಲ ಸರಕು ಸಾಗಾಣಿಕೆಗೆ ಸಮಸ್ಯೆಯಾಗುತ್ತದೆ. ಇದರಿಂದಾಗಿ ಮತ್ತಷ್ಟು ಬೆಲೆ ಹೆಚ್ಚಾಗುವ ಸಾಧ್ಯತೆಯೂ ಇದೆ.

 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ