Breaking News

ದೀಪಾವಳಿ ವೇಳೆ ಬೆಂಗಳೂರಲ್ಲಿ ಹಸಿರು ಪಟಾಕಿ ಸಿಡಿಸಲು ಮಾತ್ರ ಅನುಮತಿ

Spread the love

ಬೆಂಗಳೂರು : ಈ ಬಾರಿಯೂ ಪರಿಸರಕ್ಕೆ ಮಾರಕವಾಗುವ ಪಟಾಕಿ ಸಿಡಿಸಲು ಅನುಮತಿ ದೊರೆಯುವ ಸಾಧ್ಯತೆಗಳಿಲ್ಲ. ಈಗಾಗಲೇ ಹಸಿರು ನ್ಯಾಯಾಲಯ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅನುಮತಿ ನೀಡಿರುವುದರಿಂದ ನ್ಯಾಯಾಲಯದ ಆದೇಶ ಪಾಲಿಸಲು ಬಿಬಿಎಂಪಿ ತೀರ್ಮಾನಿಸಿದೆ. ಹೀಗಾಗಿ ನಗರದಲ್ಲಿ ಕೇವಲ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅನುಮತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಕಳೆದ ಬಾರಿಯ ದೀಪಾವಳಿ ಸಂದರ್ಭದಲ್ಲೂ ಭಾರೀ ಸದ್ದು ಮಾಡುವ ಹಾಗೂ ಪರಿಸರಕ್ಕೆ ಹಾನಿ ಮಾಡುವ ಪಟಾಕಿ ಮಾರಾಟ ಮಾಡಲು ಅನುಮತಿ ನೀಡಿರಲಿಲ್ಲ.

ಅದೇ ರೀತಿ ಈ ಬಾರಿಯೂ ಕೇವಲ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅವಕಾಶ ಸಿಗುವ ಸಾಧ್ಯತೆಗಳಿವೆ. ಇದರ ಜತೆಗೆ ನೆರೆಯ ರಾಜ್ಯಗಳಿಂದ ಅಕ್ರಮವಾಗಿ ನಗರಕ್ಕೆ ತಂದು ಪರಿಸರಕ್ಕೆ ಮಾರಕವಾಗುವಂತಹ ಪಟಾಕಿ ಮಾರಾಟ ಮಾಡುವವರ ವಿರುದ್ಧವೂ ಶಿಸ್ತುಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

ಈಗಾಗಲೇ ಗೋದಾಮೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿ ಸೋಟಿಸಿ ಇಬ್ಬರು ಮೃತಪಟ್ಟಿದ್ದರು. ಈ ಘಟನೆ ನಂತರ ಅಕ್ರಮ ಪಟಾಕಿ ಗೋದಾಮುಗಳ ಮೇಲೆ ಪೊಲೀಸರು ಹಾಗೂ ಬಿಬಿಎಂಪಿ ಸಿಬ್ಬಂದಿ ದಾಳಿ ನಡೆಸಿ ಮುಂದೆ ಪಟಾಕಿ ಮಾರದಂತೆ ಎಚ್ಚರಿಕೆ ನೀಡಿದ್ದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ