Breaking News

ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಟಿಎಂಸಿ ನಾಯಕ ಬಾಬುಲ್ ಸುಪ್ರಿಯೊ

Spread the love

ನವದೆಹಲಿ: ತಿಂಗಳ ಹಿಂದೆಯಷ್ಟೇ ಬಿಜೆಪಿ ತೊರೆದು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಪಕ್ಷ ಸೇರಿದ್ದ ಕೇಂದ್ರದ ಮಾಜಿ ಸಚಿವ ಬಾಬುಲ್ ಸುಪ್ರಿಯೊ ಮಂಗಳವಾರ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಸಭೆಯ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಇಷ್ಟು ದಿನ ನನ್ನ ಮೇಲೆ ವಿಶ್ವಾಸವಿಟ್ಟ ಪಕ್ಷ ಮತ್ತು ಬಿಜೆಪಿ ನಾಯಕರಾದ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ’ ಎಂದರು.

‘ಬಿಜೆಪಿಯಿಂದ ನಾನು ರಾಜಕೀಯ ಜೀವನ ಆರಂಭಿಸಿದೆ. ಅಂಥ ಪಕ್ಷದೊಂದಿಗೆ ಸಂಬಂಧ ಕಳೆದುಕೊಳ್ಳುವುದು ಸುಲಭದ ಮಾತಲ್ಲ. ಈಗ ಬಿಜೆಪಿಯೊಂದಿಗೆ ಅಧಿಕೃತವಾಗಿ ಸಂಬಂಧ ಕಡಿದುಕೊಳ್ಳುತ್ತಿರುವುದಕ್ಕೆ ನನ್ನ ಮನಸ್ಸು ಭಾರವಾಗಿದೆ’ ಎಂದು ಬಾಬುಲ್ ಹೇಳಿದರು.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ