Breaking News

ಬ್ರಹ್ಮಾವರ : ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರ ಶವಗಳು ಪತ್ತೆ

Spread the love

ಬ್ರಹ್ಮಾವರ : ತಾಲೂಕಿನ ಉಗ್ಗೇಲ್ ಬೆಟ್ಟು ಎಂಬಲ್ಲಿ ಮಡಿಸಾಲು ಹೊಳೆಯಲ್ಲಿ ಈಜಲು ತೆರಳಿದ್ದ ಗೆಳೆಯರಿಬ್ಬರು ಮಂಗಳವಾರ ನೀರುಪಾಲಾಗಿದ್ದು, ಶವಗಳು ಬುಧವಾರ ಪತ್ತೆಯಾಗಿದೆ.

ಮೃತ ದುರ್ದೈವಿಗಳು ಶ್ರೇಯಸ್ (18) ಮತ್ತು ಅನಾಸ್ (16)ಎಂದು ತಿಳಿದು ಬಂದಿದೆ.

ಈಜಲು ತೆರಳಿದ್ದ ಮೂವರ ಪೈಕಿ ಇಬ್ಬರು ನೀರುಪಾಲಾಗಿದ್ದು, ಪಾರಾಗಿದ್ದ ಓರ್ವ ವಿಚಾರವನ್ನು ಯಾರಿಗೂ ಹೇಳದೆ ಗುಟ್ಟು ಮಾಡಿದ್ದ.

ನಾಪತ್ತೆಯಾದ ಇಬ್ಬರ ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮಂಗಳವಾರ ಸಂಜೆಯೇ ಬಾಲಕರು ನೀರುಪಾಲಾಗಿರುವ ವಿಚಾರವನ್ನು ಪೊಲೀಸರು ಖಚಿತಪಡಿಸಿಕೊಂಡು ನದಿಯಲ್ಲಿ ಹುಡುಕಾಟಕ್ಕಿಳಿದಿದ್ದರು. ಈಜು ಪಟು ಈಶ್ವರ್ ಅವರನ್ನು ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿತ್ತು.

ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ