Breaking News

ಆರ್ಯನ್​ ಭೇಟಿ ಮಾಡಿದ ಶಾರುಖ್​ ಖಾನ್ ತೆಗೆದುಕೊಂಡ್ರು ಕಠಿಣ ನಿರ್ಧಾರ; ಪರಿಣಾಮ ಯಾರ ಮೇಲೆ?

Spread the love

ಆರ್ಯನ್​ ಖಾನ್​ ಪ್ರಕರಣ ದಿನ ಕಳೆದಂತೆ ಜಟಿಲವಾಗುತ್ತಲೇ ಇದೆ. ಎನ್​ಸಿಬಿ ನಿತ್ಯ ಹೊಸಹೊಸ ಸಾಕ್ಷ್ಯಗಳೊಂದಿಗೆ ಕೋರ್ಟ್​ ಮುಂದೆ ಹಾಜರಿ ಹಾಕುತ್ತಿದೆ. ಆರ್ಯನ್​ಗಿಂತಲೂ ಬಲವಾಗಿ ಎನ್​ಸಿಬಿ ಪರ ವಕೀಲರು ವಾದ ಮಂಡಿಸುತ್ತಿದ್ದಾರೆ.

ಶಾರುಖ್​ ಖಾನ್​ ಕಳೆದ ಅರ್ಧ ತಿಂಗಳಿಂದ ಚಿಂತೆಗೆ ಒಳಗಾಗಿದ್ದಾರೆ. ಆರ್ಯನ್​ ಖಾನ್​ ಬಂಧನದ ನಂತರದಲ್ಲಿ ಅವರು ಸಂಪೂರ್ಣವಾಗಿ ಚಿಂತೆಗೆ ಒಳಗಾಗಿದ್ದಾರೆ. ಆರ್ಯನ್​ ಖಾನ್​ ಅವರನ್ನು ಹೇಗೆ ಜೈಲಿನಿಂದ ಹೊರಗೆ ತರಬೇಕು ಎನ್ನುವ ಚಿಂತೆ ಬಿಟ್ಟೂ ಬಿಡದೇ ಕಾಡುತ್ತಿದೆ. ಅವರು ಸಾರ್ವಜನಿಕವಾಗಿ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ. ಇಂದು (ಅಕ್ಟೋಬರ್​ 21) ಜೈಲಿನಲ್ಲಿ ಆರ್ಯನ್​ ಅವರನ್ನು ಶಾರುಖ್​ ಭೇಟಿ ಮಾಡಿದ್ದಾರೆ. ಈ ಮಧ್ಯೆ ಶಾರುಖ್​ ಮಹತ್ವದ ನಿರ್ಧಾರ ಒಂದನ್ನು ತೆಗೆದುಕೊಂಡಿದ್ದಾರೆ.

ಆರ್ಯನ್​ ಖಾನ್​ ಪ್ರಕರಣ ದಿನ ಕಳೆದಂತೆ ಜಟಿಲವಾಗುತ್ತಲೇ ಇದೆ. ಎನ್​ಸಿಬಿ ನಿತ್ಯ ಹೊಸಹೊಸ ಸಾಕ್ಷ್ಯಗಳೊಂದಿಗೆ ಕೋರ್ಟ್​ ಮುಂದೆ ಹಾಜರಿ ಹಾಕುತ್ತಿದೆ. ಆರ್ಯನ್​ಗಿಂತಲೂ ಬಲವಾಗಿ ಎನ್​ಸಿಬಿ ಪರ ವಕೀಲರು ವಾದ ಮಂಡಿಸುತ್ತಿದ್ದಾರೆ. ಈ ಕಾರಣಕ್ಕೆ ಆರ್ಯನ್​ಗೆ ಜಾಮೀನು ಸಿಗುತ್ತಿಲ್ಲ. ಈ ಮಧ್ಯೆ ಆರ್ಯನ್​ ನ್ಯಾಯಾಂಗ ಬಂಧನದ ಅವಧಿ ಅಕ್ಟೋಬರ್​ 30ರವರೆಗೆ ವಿಸ್ತರಣೆ ಆಗಿದೆ. ಸದ್ಯ, ಆರ್ಯನ್​ ಪರ ವಕೀಲರು ಆರ್ಯನ್​ಗೆ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್​​ ಮೆಟ್ಟಿಲೇರಿದ್ದಾರೆ. ಇದರ ವಿಚಾರಣೆಗೆ ಕೊಂಚ ಸಮಯ ಹಿಡಿಯಬಹುದು. ಈ ಎಲ್ಲಾ ಕಾರಣಕ್ಕೆ ಆರ್ಯನ್​ಗೆ ಸದ್ಯಕ್ಕೆ ಜಾಮೀನು ಸಿಗುವ ಸಾದ್ಯತೆ ಇಲ್ಲ. ಇದು ಶಾರುಖ್​ ಅವರನ್ನು ಚಿಂತೆಗೆ ಈಡು ಮಾಡಿದೆ.

ನವೆಂಬರ್ 2ರಂದು ಶಾರುಖ್​ ಖಾನ್​ ಜನ್ಮದಿನ. ಮಗನ ಸಮಸ್ಯೆಯಿಂದ ಶಾರುಖ್​ ಚಿಂತೆಗೆ ಒಳಗಾಗಿದ್ದಾರೆ. ಇಂದು ಮಗನ ಭೇಟಿ ಮಾಡಿದ ಅವರು ಈ ಬಾರಿ ಜನ್ಮದಿನ ಆಚರಿಸಿಕೊಳ್ಳದೇ ಇರಲು​ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಅವರ ಜನ್ಮದಿನದಂದು ಮನ್ನತ್​ ಎದುರು ನೂರಾರು ಅಭಿಮಾನಿಗಳು ಸೇರುತ್ತಿದ್ದರು. ಆದರೆ, ಈ ಬಾರಿ ಮನೆ ಬಳಿ ಬರದೆ ಇರದಂತೆ ಅಭಿಮಾನಿಗಳ ಬಳಿ ಸೂಚಿಸಲು ಶಾರುಖ್​ ನಿರ್ಧರಿಸಿದ್ದಾರೆ ಎನ್ನುತ್ತಿವೆ ಮೂಲಗಳು. ಇದರ ಮಧ್ಯೆ ಮತ್ತೊಂದು ವಿಚಾರವೂ ಇದೆ.

ಶಾರುಖ್​ ಖಾನ್​ ಸದ್ಯ ಎರಡು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಬಗ್ಗೆ ಈವರೆಗೆ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಶಾರುಖ್​ ಜನ್ಮದಿನದಂದು ಈ ಬಗ್ಗೆ ಘೋಷಣೆ ಮಾಡುವ ಬಗ್ಗೆ ಚಿತ್ರತಂಡ ಚಿಂತನೆ ನಡೆಸಿತ್ತು. ಆದರೆ ಆರ್ಯನ್​ ಖಾನ್​ ಪ್ರಕರಣದಿಂದ ಶಾರುಖ್​ ಖ್ಯಾತಿಗೆ ಕಪ್ಪು ಚುಕ್ಕೆ ಬಿದ್ದಿದೆ. ಇನ್ನು, ಶಾರುಖ್​ ಕೂಡ ಬರ್ತ್​ಡೇ ಆಚರಿಸಿಕೊಳ್ಳುತ್ತಿಲ್ಲ. ಈ ಕಾರಣಕ್ಕೆ ಸಿನಿಮಾ ತಂಡದವರು ಯಾವುದೇ ಘೋಷಣೆ ಮಾಡದಿರಲು ನಿರ್ಧರಿಸಿದ್ದಾರೆ. ಇದರ ಜತೆಗೆ ಸಿನಿಮಾ ಕೆಲಸಗಳು ಕೂಡ ವಿಳಂಬವಾಗುತ್ತಿದೆ. ಈ ಎಲ್ಲಾ ಕಾರಣಕ್ಕೆ ಚಿತ್ರತಂಡದವರು ಚಿಂತೆಗೆ ಒಳಗಾಗಿದ್ದಾರೆ. ಹೀಗಾಗಿ, ಇದರ ನೇರ ಪರಿಣಾಮ ನಿರ್ಮಾಪಕರ ಮೇಲೆ ಬೀಳುತ್ತಿದೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ