Breaking News
Home / Uncategorized / ವಿಮಾನ ನಿಲ್ದಾಣದಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ಶಾಹಿದ್​ ಕಪೂರ್​ ಪತ್ನಿ

ವಿಮಾನ ನಿಲ್ದಾಣದಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ಶಾಹಿದ್​ ಕಪೂರ್​ ಪತ್ನಿ

Spread the love

ಶಾಹಿದ್​ ಕಪೂರ್ ಮತ್ತು ಮೀರಾ ರಜಪೂತ್​ ಅವರು ಮಾಲ್ಡೀವ್ಸ್​ ಪ್ರವಾಸಕ್ಕೆ ಹೋಗಿದ್ದರು. ವಾಪಸ್​ ಬರುವಾಗ ಮುಂಬೈ ಏರ್​ಪೋರ್ಟ್​ನಲ್ಲಿ ಮೀರಾ ಧರಿಸಿದ್ದ ಡ್ರೆಸ್​ ಎಲ್ಲರ ಕಣ್ಣು ಕುಕ್ಕಿದೆ. ಅದು ಟ್ರೋಲ್​ಗೆ ಕಾರಣ ಆಗಿದೆ.​

ಬಾಲಿವುಡ್​ನ ಖ್ಯಾತ ನಟ ಶಾಹಿದ್​ ಕಪೂರ್​ ಅವರ ಪತ್ನಿ ಮೀರಾ ರಜಪೂತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಆಗುತ್ತಿದ್ದಾರೆ. ಅದಕ್ಕೆಲ್ಲ ಕಾರಣ ಅವರು ಧರಿಸಿರುವ ಬಟ್ಟೆ. ಯಾವ ರೀತಿಯ ಬಟ್ಟೆ ಧರಿಸಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಸೆಲೆಬ್ರಿಟಿಗಳು ಹೇಗೆ ಕಾಣಿಸಿಕೊಳ್ಳುತ್ತಾರೆ ಎಂಬುದು ಕೂಡ ಮುಖ್ಯವಾಗುತ್ತದೆ. ಮೀರಾ ರಜಪೂತ್​ ಅವರು ಇತ್ತೀಚೆಗೆ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡ ರೀತಿಗೆ ಎಲ್ಲರೂ ಬೆರಗಾಗಿದ್ದಾರೆ. ಒಂದು ವರ್ಗದ ನೆಟ್ಟಿಗರು ತುಂಬ ವ್ಯಂಗ್ಯವಾಗಿ ಕಾಲೆಳೆಯುತ್ತಿದ್ದಾರೆ.

ಇಬ್ಬರು ಮಕ್ಕಳ ತಾಯಿ ಮೀರಾ ರಜಪೂತ್​. ಅವರು ಚಿತ್ರರಂಗಕ್ಕೆ ಕಾಲಿಡುತ್ತಾರೆ ಎಂಬ ಸುದ್ದಿ ಬಹಳ ದಿನಗಳಿಂದ ಕೇಳಿಬರುತ್ತಿದೆಯಾದರೂ ಅದು ನಿಜವಾಗಿಲ್ಲ. ನೋಡಲು ಹೀರೋಯಿನ್​ ರೀತಿಯೇ ಸುಂದರವಾಗಿರುವ ಮೀರಾ ಅವರು ಗ್ಲಾಮರಸ್​ ಫೋಟೋಶೂಟ್​ಗಳ ಮೂಲಕ ಮಿಂಚುತ್ತಾರೆ. ಈ ನಡುವೆ ವಿಮಾನ ನಿಲ್ದಾಣದಲ್ಲಿ ಹಾಟ್​ ಆಗಿ ಕಾಣಿಸಿಕೊಂಡಿದ್ದನ್ನು ಜನರು ಯಾಕೋ ಸಹಿಸುತ್ತಿಲ್ಲ.

ಇಬ್ಬರು ಮಕ್ಕಳನ್ನು ಕರೆದುಕೊಂಡು ಶಾಹಿದ್​ ಕಪೂರ್​ ಮತ್ತು ಮೀರಾ ರಜಪೂತ್​ ಅವರು ಮಾಲ್ಡೀವ್ಸ್​ ಪ್ರವಾಸಕ್ಕೆ ಹೋಗಿದ್ದರು. ಇತ್ತೀಚೆಗೆ ಅವರು ಪ್ರವಾಸ ಮುಗಿಸಿ ಬಂದಿದ್ದಾರೆ. ವಾಪಸ್​ ಬರುವಾಗ ಪಾಪರಾಜಿಗಳು ಮುಂಬೈ ಏರ್​ಪೋರ್ಟ್​ನಲ್ಲಿ ಅವರ ಫೋಟೋ ಮತ್ತು ವಿಡಿಯೋ ಸೆರೆ ಹಿಡಿದಿದ್ದಾರೆ. ಅದರಲ್ಲಿ ಮೀರಾ ಧರಿಸಿರುವ ಡ್ರೆಸ್​ ಹೈಲೈಟ್​ ಆಗಿದೆ.

ಮೀರಾ ಅವರು ಪ್ಯಾಂಟ್​ ಬದಲಿಗೆ ಅತಿ ಚಿಕ್ಕ ಶಾರ್ಟ್ಸ್​ ಧರಿಸಿರುವುದು ಟ್ರೋಲಿಗರ ಕಣ್ಣು ಕುಕ್ಕುತ್ತಿದೆ. ಅದನ್ನು ಕಂಡು ಬಗೆಬಗೆಯಲ್ಲಿ ಕಮೆಂಟ್​ ಮಾಡಲಾಗುತ್ತಿದೆ. ‘ಅವರು ಏನು ಧರಿಸಿದ್ದಾರೆ ಎಂಬುದೇ ಗೊತ್ತಾಗುತ್ತಿಲ್ಲ. ಅವರಿಗೆ ಹುಚ್ಚು ಹಿಡಿದಿದೆ ಎನಿಸುತ್ತದೆ’ ಎಂದು ವ್ಯಕ್ತಿಯೊಬ್ಬರು ಖಾರವಾಗಿ ಕಮೆಂಟ್​ ಮಾಡಿದ್ದಾರೆ. ‘ಮೀರಾ ಯಾಕೆ ಬೆತ್ತಲಾಗಿ ಬರುತ್ತಿದ್ದಾರೆ? ಬಟ್ಟೆ ಹಾಕುವುದನ್ನು ಮರೆತು ಅವರು ರಸ್ತೆಗೆ ಬಂದಿರಬಹುದು. ಇಷ್ಟೆಲ್ಲ ಹಣ ಗಳಿಸುವವರು ಒಳ್ಳೆಯ ಬಟ್ಟೆ ಯಾಕೆ ಕೊಂಡುಕೊಳ್ಳುವುದಿಲ್ಲ? ಇದೆಲ್ಲ ಪ್ರಚಾರದ ಗಿಮಿಕ್​ ಇದಕ್ಕಾಗಿ ಒಂದು ವಾರದಿಂದ ಪ್ಲ್ಯಾನ್​ ಮಾಡಿರುತ್ತಾರೆ’ ಎಂಬಿತ್ಯಾದಿ ಕಮೆಂಟ್​ಗಳು ಬಂದಿವೆ.

2015ರ ಜುಲೈ 7ರಂದು ಶಾಹಿದ್​ ಕಪೂರ್​ ಮತ್ತು ಮೀರಾ ರಜಪೂತ್​ ಮದುವೆಯಾದರು. ಈ ಜೋಡಿಗೆ ಮಿಶಾ ಮತ್ತು ಝೈನ್​ ಎಂಬಿಬ್ಬರು ಮಕ್ಕಳಿದ್ದಾರೆ. ನಿರ್ದೇಶಕರಾದ ರಾಜ್ ಮತ್ತು ಡಿಕೆ ಅವರ ಹೊಸ ವೆಬ್​ ಸರಣಿಯಲ್ಲಿ ಶಾಹಿದ್​ ಕಪೂರ್​ ನಟಿಸುತ್ತಿದ್ದಾರೆ.


Spread the love

About Laxminews 24x7

Check Also

ಜನರ ಬದುಕಿನ ಭಾರ ಕಡಿಮೆ ಮಾಡಿದ್ದು ಕಾಂಗ್ರೆಸ್‌ ಎಂದ ಈ. ತುಕಾರಾಂ

Spread the love ಹೊಸಪೇಟೆ: ರೈತರ ಸಾಲ ಮನ್ನಾದಿಂದ ಹಿಡಿದು ಜನ ಸಾಮಾನ್ಯರ ಬದುಕಿನ ಭಾರವನ್ನು ಕಡಿಮೆ ಮಾಡಿದ್ದು ಕಾಂಗ್ರೆಸ್‌. ರಾಜ್ಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ