Breaking News

ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ರೂಲ್ಸ್; ಹೈಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು

Spread the love

ಬೆಂಗಳೂರು: ಪ್ರತಿಭಟನೆ ವಿಚಾರವಾಗಿ ಸುಖಾಸುಮ್ಮನೆ ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸಿ. ಏಕೆಂದರೆ ಬೆಂಗಳೂರಿನಲ್ಲಿ ಇನ್ಮುಂದೆ ಪ್ರತಿಭಟನೆಗೆ ಹೊಸ ನಿಯಮವನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ. ಪ್ರತಿಭಟನೆ, ಜಾಥಾಗಳಿಂದ ಸಾರ್ವಜನಿಕರಿಗೆ ಕಿರಿಕಿರಿ ಹಿನ್ನೆಲೆ ಹೈಕೋರ್ಟ್ ಸೂಚನೆ ನೀಡಿದ್ದು, ಈ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಪೊಲೀಸರು ಕರ್ನಾಟಕ ಪೊಲೀಸ್ ಌಕ್ಟ್ ಅಡಿ ನಿಬಂಧನೆ ವಿಧಿಸಲು ಸಿದ್ಧತೆ ನಡೆಸಿದೆ.

ಸರ್ಕಾರದಿಂದ ಅನುಮೋದನೆ ಪಡೆಯಲು ನಗರ ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದ್ದು, ಯಾವುದೇ ಪ್ರತಿಭಟನೆಗೆ ಕೇವಲ 20 ಜನರಿಗೆ ಮಾತ್ರ ಅವಕಾಶ. 20ಕ್ಕೂ ಹೆಚ್ಚು ಜನರಿದ್ದರೆ ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಸೂಚನೆ. ಫ್ರೀಡಂಪಾರ್ಕ್‌ನಲ್ಲೂ 500ಕ್ಕೂ ಹೆಚ್ಚು ಜನ ಇರುವಂತಿಲ್ಲ. 500ಕ್ಕೂ ಹೆಚ್ಚು ಜನರಿದ್ದರೆ ಬಿಐಇಸಿಯಲ್ಲಿ ಧರಣಿಗೆ ಅವಕಾಶ.

 


Spread the love

About Laxminews 24x7

Check Also

ಡಿಸಿಸಿ ಬ್ಯಾಂಕ್ ಚುನಾವಣೆಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಕೆ

Spread the love ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಬೆಳಗಾವಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ನನ್ನ ನಾಮಪತ್ರವನ್ನು ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ