Breaking News
Home / ಜಿಲ್ಲೆ / ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ 8 ಅಡಿ ಆಳದಿಂದ ಚಿಮ್ಮಿದ ಜಲಧಾರೆ- ಪವಾಡ ಎಂದ ಭಕ್ತರು

ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ 8 ಅಡಿ ಆಳದಿಂದ ಚಿಮ್ಮಿದ ಜಲಧಾರೆ- ಪವಾಡ ಎಂದ ಭಕ್ತರು

Spread the love

ಮಂಗಳೂರು: ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೆ ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ಆವರಣದಲ್ಲಿ ಕೇವಲ 8 ಅಡಿಯಲ್ಲಿ ನೀರು ಸಿಕ್ಕಿ ಅಚ್ಚರಿ ಘಟನೆ ನಡೆದಿದೆ.

ಪುತ್ತೂರು ಮಹಾಲಿಂಗೇಶ್ವರನ ಜಾತ್ರೆ ಅಂದ್ರೆ ಜಿಲ್ಲೆಯ ದೊಡ್ಡ ಜಾತ್ರೆ. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್‍ನಿಂದ ಭಕ್ತರಿಗೆ ಪ್ರವೇಶ ಇಲ್ಲದೆ ಶಾಸ್ತ್ರೋಕ್ತವಾಗಿ ಜಾತ್ರೆ ನಡೆಯುತ್ತಿದೆ. ಜಾತ್ರಾ ಸಂದರ್ಭದ ದೇಗುಲದ ಆವರಣದ ಅಯ್ಯಪ್ಪಸ್ವಾಮಿ ಗುಡಿ ಬಳಿ, ದೇವರ ಅವಭೃತ ಸ್ನಾನಕ್ಕೆ ತಾತ್ಕಾಲಿಕ ಕೆರೆ ನಿರ್ಮಿಸಲಾಗಿದ್ದು, ಇದರಲ್ಲಿ ಬೇಸಿಗೆಯ ಈ ಸಮಯದಲ್ಲೂ ಕೇವಲ 8 ಅಡಿಗೆ ಬಹಳಷ್ಟು ನೀರು ಸಿಕ್ಕಿದ್ದು ಭಕ್ತರಿಗೆ ಅಚ್ಚರಿ  ಮೂಡಿಸಿದೆ.

ಹಿಟಾಚಿಯಲ್ಲಿ ಸಂಜೆ ವೇಳೆ ಕೆರೆ ತೊಡಲು ಆರಂಭಿಸಿ ರಾತ್ರಿ ಪೂಜೆಗೂ ಮನ್ನವೇ ನೀರು ಸಿಕ್ಕಿದ್ದು ಕುತೂಹಲಕ್ಕೂ ಕಾರಣವಾಗಿದೆ. ನೂರಾರು ಅಡಿ ಬೋರ್ ವೆಲ್ ಕೊರೆಸಿದರೂ ನೀರು ಸಿಗದ ಈ ಬಿರು ಬೇಸಿಗೆಯಲ್ಲಿ 8 ಅಡಿಯಲ್ಲೇ ಭರಪೂರ ನೀರು ಸಿಕ್ಕಿದ್ದನ್ನು ಕಂಡ ಭಕ್ತರು ಇದು ದೇವರ ಪವಾಡ ಎನ್ನುತ್ತಿದ್ದಾರೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ