Breaking News

ಪುತ್ತೂರು ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ 8 ಅಡಿ ಆಳದಿಂದ ಚಿಮ್ಮಿದ ಜಲಧಾರೆ- ಪವಾಡ ಎಂದ ಭಕ್ತರು

Spread the love

ಮಂಗಳೂರು: ದೇಶವೇ ಕೊರೊನಾ ಭೀತಿಯಿಂದ ಲಾಕ್‍ಡೌನ್ ಆಗಿದೆ. ಆದರೆ ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ಆವರಣದಲ್ಲಿ ಕೇವಲ 8 ಅಡಿಯಲ್ಲಿ ನೀರು ಸಿಕ್ಕಿ ಅಚ್ಚರಿ ಘಟನೆ ನಡೆದಿದೆ.

ಪುತ್ತೂರು ಮಹಾಲಿಂಗೇಶ್ವರನ ಜಾತ್ರೆ ಅಂದ್ರೆ ಜಿಲ್ಲೆಯ ದೊಡ್ಡ ಜಾತ್ರೆ. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್‍ನಿಂದ ಭಕ್ತರಿಗೆ ಪ್ರವೇಶ ಇಲ್ಲದೆ ಶಾಸ್ತ್ರೋಕ್ತವಾಗಿ ಜಾತ್ರೆ ನಡೆಯುತ್ತಿದೆ. ಜಾತ್ರಾ ಸಂದರ್ಭದ ದೇಗುಲದ ಆವರಣದ ಅಯ್ಯಪ್ಪಸ್ವಾಮಿ ಗುಡಿ ಬಳಿ, ದೇವರ ಅವಭೃತ ಸ್ನಾನಕ್ಕೆ ತಾತ್ಕಾಲಿಕ ಕೆರೆ ನಿರ್ಮಿಸಲಾಗಿದ್ದು, ಇದರಲ್ಲಿ ಬೇಸಿಗೆಯ ಈ ಸಮಯದಲ್ಲೂ ಕೇವಲ 8 ಅಡಿಗೆ ಬಹಳಷ್ಟು ನೀರು ಸಿಕ್ಕಿದ್ದು ಭಕ್ತರಿಗೆ ಅಚ್ಚರಿ  ಮೂಡಿಸಿದೆ.

ಹಿಟಾಚಿಯಲ್ಲಿ ಸಂಜೆ ವೇಳೆ ಕೆರೆ ತೊಡಲು ಆರಂಭಿಸಿ ರಾತ್ರಿ ಪೂಜೆಗೂ ಮನ್ನವೇ ನೀರು ಸಿಕ್ಕಿದ್ದು ಕುತೂಹಲಕ್ಕೂ ಕಾರಣವಾಗಿದೆ. ನೂರಾರು ಅಡಿ ಬೋರ್ ವೆಲ್ ಕೊರೆಸಿದರೂ ನೀರು ಸಿಗದ ಈ ಬಿರು ಬೇಸಿಗೆಯಲ್ಲಿ 8 ಅಡಿಯಲ್ಲೇ ಭರಪೂರ ನೀರು ಸಿಕ್ಕಿದ್ದನ್ನು ಕಂಡ ಭಕ್ತರು ಇದು ದೇವರ ಪವಾಡ ಎನ್ನುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ